ರಾಮನಗರ:ಹೋಂ ಸ್ಟೇ ನಲ್ಲಿ ಯುವತಿಯ ಪೋಟೋ ತೆಗೆಯುತ್ತಿದ್ದ ಯುವಕರ ಕೃತ್ಯ ಪ್ರಶ್ನಿಸಿದ ಯುವಕನನ್ನು ದೊಣ್ಣೆಯಿಂದ ದಾರುಣವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ಘಟನೆ ನಡೆದಿದ್ದು ಬಿಕಾಂ ಪದವಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಚಿಕ್ಕೇನಹಳ್ಳಿಯ ಹೋಂ ಸ್ಟೇ-ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿ ಸಂಭ್ರಮಿಸಿದ್ದಾರೆ ನಂತರ ವಿದ್ಯಾರ್ಥಿಗಳು ಹೊರಡುವಾಗ ಹೋಂ ಸ್ಟೇ ನಲ್ಲಿದ್ದ ಚಂದು ಮತ್ತು ನಾಗೇಶ್ ಎಂಬ ಇಬ್ಬರು ವಿದ್ಯಾರ್ಥಿನಿಯ ಫೋಟೋ ತೆಗೆದಿದ್ದಾರೆ ಇದಕ್ಕೆ ಪುನೀತ್ ಎಂಬ ವಿದ್ಯಾರ್ಥಿ ಯುವತಿಯ ಫೋಟೋ ಯಾಕೆ ತೆಗೆದಿದ್ದೀರಾ ಎಂದು ಪ್ರಶ್ನಿಸಿದ್ದಾನೆ ಇದಕ್ಕೆ ಪೋಟೋ ಶೂಟ್ ಮಾಡುತ್ತಿದ್ದ ಚಂದು ಮತ್ತು ನಾಗೇಶ್ ಕೋಪಗೊಂಡು ಇಬ್ಬರು ಸೇರಿ ದೊಣ್ಣೆಯಿಂದ ಪುನೀತ್ ನನ್ನು ಹೊಡೆದಿದ್ದಾರೆ.ದೊಣ್ಣೆ ಏಟಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಗಾಯಗೊಂಡ ಪುನೀತ್ ನನ್ನು ಬೆಂಗಳೂರಿನ ಕೆಂಗೇರಿ ಸಮೀಪದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಚಿಕಿತ್ಸೆ ಫಲಿಸದೇ ಪುನೀತ್ ಮೃತಪಟ್ಟಿದ್ದಾನೆ.ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27