ರಾಮನಗರ:ಹೋಂ ಸ್ಟೇ ನಲ್ಲಿ ಯುವತಿಯ ಪೋಟೋ ತೆಗೆಯುತ್ತಿದ್ದ ಯುವಕರ ಕೃತ್ಯ ಪ್ರಶ್ನಿಸಿದ ಯುವಕನನ್ನು ದೊಣ್ಣೆಯಿಂದ ದಾರುಣವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ಘಟನೆ ನಡೆದಿದ್ದು ಬಿಕಾಂ ಪದವಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಚಿಕ್ಕೇನಹಳ್ಳಿಯ ಹೋಂ ಸ್ಟೇ-ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿ ಸಂಭ್ರಮಿಸಿದ್ದಾರೆ ನಂತರ ವಿದ್ಯಾರ್ಥಿಗಳು ಹೊರಡುವಾಗ ಹೋಂ ಸ್ಟೇ ನಲ್ಲಿದ್ದ ಚಂದು ಮತ್ತು ನಾಗೇಶ್ ಎಂಬ ಇಬ್ಬರು ವಿದ್ಯಾರ್ಥಿನಿಯ ಫೋಟೋ ತೆಗೆದಿದ್ದಾರೆ ಇದಕ್ಕೆ ಪುನೀತ್ ಎಂಬ ವಿದ್ಯಾರ್ಥಿ ಯುವತಿಯ ಫೋಟೋ ಯಾಕೆ ತೆಗೆದಿದ್ದೀರಾ ಎಂದು ಪ್ರಶ್ನಿಸಿದ್ದಾನೆ ಇದಕ್ಕೆ ಪೋಟೋ ಶೂಟ್ ಮಾಡುತ್ತಿದ್ದ ಚಂದು ಮತ್ತು ನಾಗೇಶ್ ಕೋಪಗೊಂಡು ಇಬ್ಬರು ಸೇರಿ ದೊಣ್ಣೆಯಿಂದ ಪುನೀತ್ ನನ್ನು ಹೊಡೆದಿದ್ದಾರೆ.ದೊಣ್ಣೆ ಏಟಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಗಾಯಗೊಂಡ ಪುನೀತ್ ನನ್ನು ಬೆಂಗಳೂರಿನ ಕೆಂಗೇರಿ ಸಮೀಪದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಚಿಕಿತ್ಸೆ ಫಲಿಸದೇ ಪುನೀತ್ ಮೃತಪಟ್ಟಿದ್ದಾನೆ.ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



