ರಾಮನಗರ:ಹೋಂ ಸ್ಟೇ ನಲ್ಲಿ ಯುವತಿಯ ಪೋಟೋ ತೆಗೆಯುತ್ತಿದ್ದ ಯುವಕರ ಕೃತ್ಯ ಪ್ರಶ್ನಿಸಿದ ಯುವಕನನ್ನು ದೊಣ್ಣೆಯಿಂದ ದಾರುಣವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ಘಟನೆ ನಡೆದಿದ್ದು ಬಿಕಾಂ ಪದವಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಚಿಕ್ಕೇನಹಳ್ಳಿಯ ಹೋಂ ಸ್ಟೇ-ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿ ಸಂಭ್ರಮಿಸಿದ್ದಾರೆ ನಂತರ ವಿದ್ಯಾರ್ಥಿಗಳು ಹೊರಡುವಾಗ ಹೋಂ ಸ್ಟೇ ನಲ್ಲಿದ್ದ ಚಂದು ಮತ್ತು ನಾಗೇಶ್ ಎಂಬ ಇಬ್ಬರು ವಿದ್ಯಾರ್ಥಿನಿಯ ಫೋಟೋ ತೆಗೆದಿದ್ದಾರೆ ಇದಕ್ಕೆ ಪುನೀತ್ ಎಂಬ ವಿದ್ಯಾರ್ಥಿ ಯುವತಿಯ ಫೋಟೋ ಯಾಕೆ ತೆಗೆದಿದ್ದೀರಾ ಎಂದು ಪ್ರಶ್ನಿಸಿದ್ದಾನೆ ಇದಕ್ಕೆ ಪೋಟೋ ಶೂಟ್ ಮಾಡುತ್ತಿದ್ದ ಚಂದು ಮತ್ತು ನಾಗೇಶ್ ಕೋಪಗೊಂಡು ಇಬ್ಬರು ಸೇರಿ ದೊಣ್ಣೆಯಿಂದ ಪುನೀತ್ ನನ್ನು ಹೊಡೆದಿದ್ದಾರೆ.ದೊಣ್ಣೆ ಏಟಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಗಾಯಗೊಂಡ ಪುನೀತ್ ನನ್ನು ಬೆಂಗಳೂರಿನ ಕೆಂಗೇರಿ ಸಮೀಪದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಚಿಕಿತ್ಸೆ ಫಲಿಸದೇ ಪುನೀತ್ ಮೃತಪಟ್ಟಿದ್ದಾನೆ.ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



