ಶ್ರೀನಿವಾಸಪುರ: ದೇವಾಲಯಗಳನ್ನು ಭಕ್ತರ ನಂಬಿಕೆಗಳು ಅವರ ಆಶಯದಂತೆ ದಾರಿ ದೀಪಗಳಾಗಿ ಮತ್ತು ಭಾವನೆಗಳ ಅನುಗುಣವಾಗಿ ನಿರ್ಮಾಣ ಮಾಡಲಾಗುತ್ತದೆ ಎಂದು ಕೋಡಿಮಠದ ಶ್ರೀ ಗಳು ಹೇಳಿದರು ಅವರು ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಮುಸ್ಲಿಂ ಕುಟುಂಬ ನೂತನವಾಗಿ ನಿರ್ಮಿಸಿರುವ ಶ್ರೀ ಪ್ರಸನ್ನ ಚೌಡೇಶ್ವರಿ ದೇವಾಲಯದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.ದೇವಾಲಯ ನಿರ್ಮಾಣ ಮಾಡಿರವಂತ ಶಫಿ ಕುಟುಂಬದ ಕಾರ್ಯ ಸಮಸ್ತ ಮನಕುಲಕ್ಕೆ ಆದರ್ಶವಾಗಿದ್ದು ಸೌರ್ಹಾದತೆಯ ಕೆಲಸ ಎಂದು ಶ್ಲಾಘಿಸಿದರು.
ಪ್ರಪಂಚಕ್ಕೆ ಮಳೆಯಿಂದ ಆಪತ್ತು!
ಮಳೆಯಿಂದ ಇನ್ನಿಲ್ಲದ ಅನಾಹುತಗಳು ಪ್ರಪಂಚವನ್ನು ಕಾಡುತ್ತದೆ ಒಂದೇರಡು ರಾಷ್ಟ್ರಗಳು ಮಳೆಯ ನೀರಿನಲ್ಲಿ ಮುಳಗಿ ಹೋಗುತ್ತದೆ,ಪ್ರಪಂಚಕ್ಕೆ ಜಾಗತೀಕ ಯುದ್ದದ ಭೀತಿ ಇದೆ ಇದರ ಪರಿಣಾಮ ನಮ್ಮ ರಾಷ್ಟ್ರದ ಮೇಲೂ ಬೀರಲಿದೆ ವೀಪರಿತ ದುಖ ಸಾವು ನೋವುಗಳು ಕಾಣುವಂತಾಗುತ್ತದೆ,ಒಡಿಶಾ ರೈಲು ದುರಂತದಂತೆ ಬೇರೆ ಬೇರೆ ರಿತೀಯ ಅವಘಡಗಳು ಸಂಭವಿಸಲಿದೆ, ಭೂಮಿ ಬಾಯಿ ತೆರೆಯುತ್ತದೆ ಕಂಪನಗಳು ಆಗುತ್ತದೆ ಇದಕ್ಕೆ ಭಗವಂತನ ಪೂಜೆ ಧ್ಯಾನವೆ ಪರಿಹಾರ ಎಂದ ಅವರು ಮತೀಯ ಸಮಸ್ಯೆಯೂ ಇದೆ ಎಂದು ನುಡಿದರು.
ದೇವಾಲಯದ ಆವರಣದಲ್ಲಿ ರಾಜಕೀಯ ವಿಚಾರ ಬೇಡ ಎಂದ ಅವರು ಆರು ತಿಂಗಳ ಹಿಂದೆ ನುಡಿದಂತೆ ರಾಜ್ಯದಲ್ಲಿ ಯಾವುದೆ ಆಸರೆ ಇಲ್ಲದಂತೆ ಒಂದೇ ಪಕ್ಷ ಅಧಿಕಾರ ನಡೆಸುತ್ತಿದೆ ಇನ್ನಿತರೆ ರಾಜಕೀಯ ವಿಚಾರಗಳು ದೇವರ ಕಾರ್ಯಕ್ಕೆ ಬಂದಿರುವಾಗ ಹೇಳುವುದು ಸೂಕ್ತ ಅಲ್ಲ ಎಂದರು.
ಕಾರ್ಯಕ್ರಮದಲ್ಲಿ ದೇವಾಲಯ ನಿರ್ಮಾಣ ಮಾಡಿದ ಶಫಿ ಕುಟುಂಬ ಸದಸ್ಯರನ್ನು ಗ್ರಾಮಸ್ಥರು ಸನ್ಮಾನಿಸಿದರು, ಈ ಸಂದರ್ಭದಲ್ಲಿ ನಾಟಿ ವೈದ್ಯ ಹೈದರ್ ಸಾಬ್, ದೇವಾಲಯಕ್ಕೆ ಜಮೀನು ದಾನ ನೀಡಿದ ನಿವೃತ್ತ ಪ್ರೋಫೇಸರ್ ವಿಜೇಂದ್ರ ಹಾಗು ಅವರ ಸಹೋದರ ಸುರೇಂದ್ರ ಮತ್ತು ಕುಟುಂಬ ಗ್ರಾಮದ ಮುಖಂಡರಾದ ಲಕ್ಷ್ಮೀಪುರ ಜಗದೀಶ್, ಪೇಪರ್ ವೆಂಕಟೇಶ್, ಕೆನರಾಬ್ಯಾಂಕ್ ಗೋವಿಂದ್ ಪತ್ರಕರ್ತ ನಾಗೇಂದ್ರ,ಶ್ರೀನಿವಾಸ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



