ಬೆಂಗಳೂರು:ಪತ್ನಿಯ ಕಾಟಕ್ಕೆ ಬೆಸೆತ್ತು ಪೋಲಿಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪೋಲಿಸ್ ಹೆಡ್ ಕಾನ್ಸ್ಟೇಬಲ್ ನನ್ನು ತಿಪ್ಪಣ್ಣ ಗುರುತಿಸಲಾಗಿದ್ದು ಇವರು ಬೆಂಗಳೂರು ನಗರದ ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಜೀವ ಬೆದರಿಕೆ ಇತ್ತು ಡೆತ್ ನೋಟ್ ನಲ್ಲಿ ಪ್ರಸ್ತಾಪ!
ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದು ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು ಮನೆ ಮಾಡಿತ್ತು ಪತ್ನಿ ಮತ್ತು ಆಕೆಯ ತಂದೆ ಯಮುನಪ್ಪ ಇಬ್ಬರು ಸೇರಿ ಮಾನಸಿಕವಾಗಿ ಹಿಂಸೆ ನೀಡುತ್ತ ಹಿಯ್ಯಾಳಿಸಿ ಅಶ್ಲೀಲವಾಗಿ ಬೈದು ಕಿರುಕುಳ ಕೊಡುತ್ತಿದ್ದರು ಜೊತೆಗೆ ಮಾವ ಯಮನಪ್ಪನಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಪ್ರಸ್ತಾಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪತ್ನಿ ಟಾರ್ಚರಗೆ ಸಾಫ್ಟವೇರ್ ಉದ್ಯೋಗಿ ಅತ್ಮಹತ್ಯೆ
ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26