ಬೆಂಗಳೂರು:ಪತ್ನಿಯ ಕಾಟಕ್ಕೆ ಬೆಸೆತ್ತು ಪೋಲಿಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪೋಲಿಸ್ ಹೆಡ್ ಕಾನ್ಸ್ಟೇಬಲ್ ನನ್ನು ತಿಪ್ಪಣ್ಣ ಗುರುತಿಸಲಾಗಿದ್ದು ಇವರು ಬೆಂಗಳೂರು ನಗರದ ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಜೀವ ಬೆದರಿಕೆ ಇತ್ತು ಡೆತ್ ನೋಟ್ ನಲ್ಲಿ ಪ್ರಸ್ತಾಪ!
ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದು ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು ಮನೆ ಮಾಡಿತ್ತು ಪತ್ನಿ ಮತ್ತು ಆಕೆಯ ತಂದೆ ಯಮುನಪ್ಪ ಇಬ್ಬರು ಸೇರಿ ಮಾನಸಿಕವಾಗಿ ಹಿಂಸೆ ನೀಡುತ್ತ ಹಿಯ್ಯಾಳಿಸಿ ಅಶ್ಲೀಲವಾಗಿ ಬೈದು ಕಿರುಕುಳ ಕೊಡುತ್ತಿದ್ದರು ಜೊತೆಗೆ ಮಾವ ಯಮನಪ್ಪನಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಪ್ರಸ್ತಾಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪತ್ನಿ ಟಾರ್ಚರಗೆ ಸಾಫ್ಟವೇರ್ ಉದ್ಯೋಗಿ ಅತ್ಮಹತ್ಯೆ
ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



