ಬೆಂಗಳೂರು:ಪತ್ನಿಯ ಕಾಟಕ್ಕೆ ಬೆಸೆತ್ತು ಪೋಲಿಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪೋಲಿಸ್ ಹೆಡ್ ಕಾನ್ಸ್ಟೇಬಲ್ ನನ್ನು ತಿಪ್ಪಣ್ಣ ಗುರುತಿಸಲಾಗಿದ್ದು ಇವರು ಬೆಂಗಳೂರು ನಗರದ ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಜೀವ ಬೆದರಿಕೆ ಇತ್ತು ಡೆತ್ ನೋಟ್ ನಲ್ಲಿ ಪ್ರಸ್ತಾಪ!
ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದು ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು ಮನೆ ಮಾಡಿತ್ತು ಪತ್ನಿ ಮತ್ತು ಆಕೆಯ ತಂದೆ ಯಮುನಪ್ಪ ಇಬ್ಬರು ಸೇರಿ ಮಾನಸಿಕವಾಗಿ ಹಿಂಸೆ ನೀಡುತ್ತ ಹಿಯ್ಯಾಳಿಸಿ ಅಶ್ಲೀಲವಾಗಿ ಬೈದು ಕಿರುಕುಳ ಕೊಡುತ್ತಿದ್ದರು ಜೊತೆಗೆ ಮಾವ ಯಮನಪ್ಪನಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಪ್ರಸ್ತಾಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪತ್ನಿ ಟಾರ್ಚರಗೆ ಸಾಫ್ಟವೇರ್ ಉದ್ಯೋಗಿ ಅತ್ಮಹತ್ಯೆ
ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



