ನ್ಯೂಜ್ ಡೆಸ್ಕ್:ಎರಡು ದಿನಗಳ ಹಿಂದೆ ಮಧ್ಯರಾತ್ರಿ ಸಮಯದಲ್ಲಿ ತಿರುಮಲ ಬೆಟ್ಟದಲ್ಲಿ ಕರಡಿಯೊಂದು ಅಬ್ಬರಿಸಿದೆ. ಶ್ರೀ ವೆಂಕಟೇಶ್ವರ ಮ್ಯೂಸಿಯಂ ಹಿಂಭಾಗದ ಕಾಡಿನಿಂದ ಬಂದ ಕರಡಿ ಜಿಂದಾಲ್ ಅತಿಥಿ ಗೃಹದ ಬಳಿ ಒಡಾಡಿರುವುದನ್ನು ಕಂಡ ಅತಿಥಿ ಗೃಹದ ಸಿಬ್ಬಂದಿ ಭಯದಿಂದ ಒಳಗೆ ಓಡಿಹೋಗಿದ್ದಾರೆ ನಂತರ ಬಾರಿ ಶಬ್ದಗಳನ್ನು ಮಾಡಿದ ಹಿನ್ನಲೆಯಲ್ಲಿ ಕರಡಿ ಅರಣ್ಯದ ಕಡೆ ಓಡಿ ಹೋಗಿದಿಯಂತೆ, ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ಪ್ರಾರಂಭವಾದ ತಿರುಮಲ ಬೆಟ್ಟದಲ್ಲಿ ಹಾಗು ಮೆಟ್ಟಿಲು ಮಾರ್ಗವಾಗಿ ಹತ್ತಿಕೊಂಡು ಹೋಗುವ ದಾರಿಯಲ್ಲಿ ಇತ್ತಿಚಿಗೆ ಕಾಡು ಪ್ರಾಣಿಗಳು ಹಾಗು ಮೃಗಗಳು ಜನರ ಕಣ್ಣಿಗೆ ಕಾಣಿಸುವುದು ಶುರುವಾಗಿದ್ದೇ ಶುರುವಾಗಿದ್ದು ಇತ್ತಿಚಿಗೆ ಸಾಮನ್ಯವಾಗುತ್ತಿದೆ, ತೀರಾ ಇತ್ತಿಚಿಗೆ ಕಾಲು ದಾರಿಯಲ್ಲಿ ಬಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ನಡೆದು ಹೋಗುತ್ತಿದ್ದ ಬಕ್ತರನ್ನು ಅತಂಕಕ್ಕೆ ಈಡುಮಾಡಿತ್ತು.
ಆಂಧ್ರ-ತಮಿಳುನಾಡು ಗಡಿಯಲ್ಲಿ ಅನೆ ದಾಳಿ ಒರ್ವ ಸಾವು
ತಮಿಳುನಾಡು-ಆಂಧ್ರ ರಾಜ್ಯಗಳ ಗಡಿ ಭಾಗದ ಓಎನ್ ಕೊತ್ತೂರ್ ಬಳಿ ಆನೆ ದಾಳಿಗೆ ತಮಿಳುನಾಡಿನ ನಿವಾಸಿ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಕರ್ನಾಟಕದ ಗಡಿಗೂ ಸಮೀವೆ ಇರುವ ತಮಿಳುನಾಡಿನ ವೇಪನಪಲ್ಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಒಂದು ವಾರದಿಂದ ಐದು ಆನೆಗಳು ಬೀಡುಬಿಟ್ಟು ಬೆಳೆಗಳ ಮೇಲೆ ದಾಳಿ ಮಾಡುತ್ತಿದ್ದು ರೈತರಿಗೆ ನಷ್ಟ ಉಂಟಾಗಿದೆ ಈ ಮದ್ಯೆ ಶನಿವಾರ ರಾತ್ರಿ ಜಮೀನಿಗೆ ತೆರಳುತಿದ್ದ ಏಕಲನಾಥಂ ಗ್ರಾಮದ ಗೋವಿಂದಪ್ಪ (45) ಹಾಗೂ ನಾಗರಾಜು ಮೇಲೆ ಆನೆಗಳ ಗುಂಪು ಅವರ ಮೇಲೆ ದಾಳಿ ಮಾಡಿದ್ದು, ಗೋವಿಂದಪ್ಪ ಸ್ಥಳದಲ್ಲೇ ಸಾವನ್ನಪ್ಪಿದರೆ ನಾಗರಾಜ್ ಗಾಯಗೊಂಡಿದ್ದು ಆತನನ್ನು ಸ್ಥಳೀಯರ ಸಹಾಯದಿಂದ ಕುಪ್ಪಂನ ಪಿಇಎಸ್ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಕೊಡಿಸಿದ್ದರಿಂದ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗಡಿದಾಟಿ ಕರ್ನಾಟಕಕ್ಕೂ ಬರಬಹುದಾದ ಆನೆಗಳು
ತಮಿಳುನಾಡಿನ ಗಡಿಯಲ್ಲಿ ಅನೆದಾಳಿಯಿಂದ ವ್ಯಕ್ತಿ ಮೃತ ಪಟ್ಟಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಗಡಿಯಿಂದ ದಾಟಿಸಿ ಒಡಿಸಿದರೆ ಗಡಿದಾಟುವ ಅನೆಗಳು ಕರ್ನಾಟಕ ಅಥಾವ ಆಂಧ್ರಕಡೆಗೆ ಬರಬಹುದು ಎನ್ನುತ್ತಾರೆ ರೈತರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26