ಶ್ರೀನಿವಾಸಪುರ:ಮನೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಹಾಡು ಹಗಲೆ ನಡೆದಿರುತ್ತದೆ,ಕುಟುಂಬದವರು ಕೃಷಿಕಾರ್ಮಿಕರಾಗಿದ್ದು ಕೂಲಿಗಾಗಿ ಹೋಗಿದ್ದ ವೇಳೆ ಕಳ್ಳತನ ನಡೆದು ಮನೆಯಲ್ಲಿದ್ದ ಸುಮಾರು 25 ಗ್ರಾಂ ಮಾಂಗಲ್ಯ ಸರ,ನಗದನ್ನು ಕಳ್ಳರು ಕದ್ದೊಯಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಹಾಲಿನ ಸೊಸೈಟಿ ಪಕ್ಕದಲ್ಲಿರುವ ದ್ಯಾವಮ್ಮ ಎನ್ನುವರಿಗೆ ಸೇರಿದ ಮನೆಯಲ್ಲಿ ಹಗಲು ಸುಮಾರು ಮೂರುಗಂಟೆ ಸಮಯದಲ್ಲಿ ಮನೆಗೆ ಹಾಕಿದ್ದ ಬೀಗ ಹೊಡೆದು ಕಳ್ಳತನ ಮಾಡಿರುವುದಾಗಿ ಎಂದು ಮನೆಯವರು ಶ್ರೀನಿವಾಸಪುರ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಸ್ಥಳಕ್ಕೆ ಪೋಲಿಸ್ ಇನ್ಸಪೇಕ್ಟರ್ ಗೊರವನಕೊಳ್ಳ ಹಾಗೂ ಸಬ್ ಇನ್ಸಪೇಕ್ಟರ್ ಜಯರಾಮ್ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯಲ್ಲಿ ಹಾಡು ಹಗಲೆ ಕಳ್ಳರ ಕೈಚಳಕಕ್ಕೆ ಕಲ್ಲೂರು ಗ್ರಾಸಮಸ್ಥರು ಏಕಾಏಕಿ ಬೆಚ್ಚಿಬಿದ್ದಾರೆ
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



