ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದ ಡಿವಿಜಿ ರಸ್ತೆಯಲ್ಲಿರುವ ಶ್ರೀನಿವಾಸಪುರ PLD ಅಧ್ಯಕ್ಷರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.ಪಟ್ಟಣದ ವೆಂಕಟೇಶ್ವರ ಬಡಾವಣೆಯ ಡಿವಿಜಿ ರಸ್ತೆಯಲ್ಲಿರುವ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ರವರ ಮನೆ ಇದ್ದು ಇವರು ಕುಟುಂಬ ಸಮೇತರಾಗಿ ಮೂರು ದಿನಗಳ ಹಿಂದೆ ಮೈಸೂರಿಗೆ ನೆಂಟರ ಮನೆಗೆ ತೆರಿಳಿದ್ದಾಗ ಕಳ್ಳತನ ನಡದಿರುತ್ತದೆ.
ಶ್ವಾನ ದಳ ಬೆರಳಚ್ಚು ತಜ್ಞರ ಭೇಟಿ
ಅಶೋಕ್ ಕುಟುಂಬ ಕಳ್ಳತನದ ಮಾಹಿತಿ ತಿಳಿದು ಮೈಸೂರಿನಿಂದ ವಾಪಾಸ್ಸಾಗುತ್ತಿದ್ದು ಸ್ಥಳಕ್ಕೆ ಪೊಲೀಸ್ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ, ಮನೆ ಮಾಲಿಕ ಅಶೋಕ್ ಬಂದ ನಂತರ ಕಳ್ಳತನವಾಗಿರುವ ವಡವೆ ಹಣದ ಮಾಹಿತಿ ತಿಳಿಯಲಿದೆ.ಸಹಾಯಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್,ಶ್ರೀನಿವಾಸಪುರ ಪೊಲೀಸ್ ಠಾಣಾಧಿಕಾರಿ ಗೊರವನಕೊಳ್ಳ ಅವರು ಅಶೋಕ್ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ದಿಂಬಾಲ್ ಅಶೋಕ್ ಮನೆ ಬಾಗಿಲು ತೆಗೆದಿರುವುದನ್ನು ಕಂಡ ಪಕ್ಕದ ಮನೆಯರು ಅನುಮಾನ ಗೊಂಡು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ,ಕಳ್ಳರು ಚಾಲಾಕಿತನದಿಂದ ಕಳ್ಳತನ ಮಾಡಿದ್ದು ದಿಂಬಾಲ್ ಅಶೋಕ್ ಅವರ ಮನೆಯ ಸುತ್ತಮುತ್ತಲಿನ ಮನೆಗಳ ಮುಂದಿನ ಸಿಸಿ ಕ್ಯಾಮಾರಗಳನ್ನು ಹೊಡೆದು ಹಾಕಿ ಕಳ್ಳತನ ಮಾಡಿದ್ದಾಗಿ ಹೇಳುತ್ತಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



