ಶ್ರೀನಿವಾಸಪುರ:ಪೋಲಿಸರೆಂದು ನಂಬಿಸಿ ವೃದ್ಧೆಯ ಮಾಂಗಲ್ಯ ಸರ ಅಪಹರಿಸಿರುವ ಘಟನೆ ಪಟ್ಟಣದ ಜನಬಿಡದಿ ವೃತ್ತ ಆಗಿರುವ ಪವನ್ ಆಸ್ಪತ್ರೆ ಬಳಿ ನಡೆದಿದೆ.
ಕಲ್ಲೂರು ಗ್ರಾಮದ ವೃದ್ದೆ ವೆಂಕಟಲಕ್ಷ್ಮಮ್ಮ ಮನೆಗೆ ಸರಕು ಖರೀದಿಸಲು ಆಸ್ಪತ್ರೆ ವೃತ್ತದ ಬಳಿ ನಡೆದು ಹೋಗುತ್ತಿರುವಾಗ ಅಪರಿಚಿತರು ವೆಂಕಟಲಕ್ಷ್ಮಮ್ಮನನ್ನು ಪರಿಚಿತರಂತೆ ಮಾತನಾಡಿ ಕಳ್ಳತನಗಳು ಹೆಚ್ಚಾಗುತ್ತಿವೆ ಮಾಂಗಲ್ಯ ಸರ ತೆಗೆದು ಬ್ಯಾಗ್ ನಲ್ಲಿ ಇಟ್ಟು ಕೊಳ್ಳಿ ಎಂದು ವೃದ್ದೆ ಕತ್ತಿನಲ್ಲಿದ್ದ ಬಂಗಾರದ ಸರವನ್ನು ತೆಗಿಸಿ ಬ್ಯಾಗ್ ನಲ್ಲಿ ಇಡಿಸಲು ಸಹಾಯ ಮಾಡುವರಂತೆ ಮಾಡಿ ಸರವನ್ನು ಎಗರಿಸಿದ್ದಾರೆ, ಇದಾದ ನಂತರ ಬ್ಯಾಗಲ್ಲಿ ಬಂಗಾರದ ಸರ ಇರುವುದನ್ನು ಖಾತ್ರಿ ಪಡಿಸಿಕೊಳ್ಳಲು ವೃದ್ದೆ ಪರಿಚಯಸ್ಥರ ಅಂಗಡಿ ಬಳಿ ಹೋಗಿ ಬ್ಯಾಗ್ ತಗೆದು ನೋಡಿದಾಗ ಮಾಂಗಲ್ಯ ಸರ ಇಲ್ಲದನ್ನು ನೋಡಿ ಗಾಭರಿಯಾಗಿದ್ದಾರೆ ಕೂಡಲೆ ಪರಿಚಯಸ್ಥರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೃದ್ದೆ ಹೇಳುವಂತೆ ಪೊಲೀಸರೆಂದು ನಂಬಿಸಿ ಪರಿಚಯಸ್ಥರಂತೆ ನಟಿಸಿ ನಾನು ಧರಿಸಿದ್ದ 40ಗ್ರಾಂ ಮಾಂಗಲ್ಯ ಚೈನು 6.5 ಗ್ರಾಂ ತಾಳಿ ಬಟ್ಟುಗಳ ಅಂದಾಜು 3ಲಕ್ಷ ಮೌಲ್ಯದ ಸರವನ್ನು ನಂಬಿಸಿ ಮೋಸಮಾಡಿ ಯಾಮಾರಿಸಿದ್ದಾರೆ ಎಂದು ಅಲವತ್ತುಕೊಳ್ಳುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



