ಶ್ರೀನಿವಾಸಪುರ:ಪೋಲಿಸರೆಂದು ನಂಬಿಸಿ ವೃದ್ಧೆಯ ಮಾಂಗಲ್ಯ ಸರ ಅಪಹರಿಸಿರುವ ಘಟನೆ ಪಟ್ಟಣದ ಜನಬಿಡದಿ ವೃತ್ತ ಆಗಿರುವ ಪವನ್ ಆಸ್ಪತ್ರೆ ಬಳಿ ನಡೆದಿದೆ.
ಕಲ್ಲೂರು ಗ್ರಾಮದ ವೃದ್ದೆ ವೆಂಕಟಲಕ್ಷ್ಮಮ್ಮ ಮನೆಗೆ ಸರಕು ಖರೀದಿಸಲು ಆಸ್ಪತ್ರೆ ವೃತ್ತದ ಬಳಿ ನಡೆದು ಹೋಗುತ್ತಿರುವಾಗ ಅಪರಿಚಿತರು ವೆಂಕಟಲಕ್ಷ್ಮಮ್ಮನನ್ನು ಪರಿಚಿತರಂತೆ ಮಾತನಾಡಿ ಕಳ್ಳತನಗಳು ಹೆಚ್ಚಾಗುತ್ತಿವೆ ಮಾಂಗಲ್ಯ ಸರ ತೆಗೆದು ಬ್ಯಾಗ್ ನಲ್ಲಿ ಇಟ್ಟು ಕೊಳ್ಳಿ ಎಂದು ವೃದ್ದೆ ಕತ್ತಿನಲ್ಲಿದ್ದ ಬಂಗಾರದ ಸರವನ್ನು ತೆಗಿಸಿ ಬ್ಯಾಗ್ ನಲ್ಲಿ ಇಡಿಸಲು ಸಹಾಯ ಮಾಡುವರಂತೆ ಮಾಡಿ ಸರವನ್ನು ಎಗರಿಸಿದ್ದಾರೆ, ಇದಾದ ನಂತರ ಬ್ಯಾಗಲ್ಲಿ ಬಂಗಾರದ ಸರ ಇರುವುದನ್ನು ಖಾತ್ರಿ ಪಡಿಸಿಕೊಳ್ಳಲು ವೃದ್ದೆ ಪರಿಚಯಸ್ಥರ ಅಂಗಡಿ ಬಳಿ ಹೋಗಿ ಬ್ಯಾಗ್ ತಗೆದು ನೋಡಿದಾಗ ಮಾಂಗಲ್ಯ ಸರ ಇಲ್ಲದನ್ನು ನೋಡಿ ಗಾಭರಿಯಾಗಿದ್ದಾರೆ ಕೂಡಲೆ ಪರಿಚಯಸ್ಥರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೃದ್ದೆ ಹೇಳುವಂತೆ ಪೊಲೀಸರೆಂದು ನಂಬಿಸಿ ಪರಿಚಯಸ್ಥರಂತೆ ನಟಿಸಿ ನಾನು ಧರಿಸಿದ್ದ 40ಗ್ರಾಂ ಮಾಂಗಲ್ಯ ಚೈನು 6.5 ಗ್ರಾಂ ತಾಳಿ ಬಟ್ಟುಗಳ ಅಂದಾಜು 3ಲಕ್ಷ ಮೌಲ್ಯದ ಸರವನ್ನು ನಂಬಿಸಿ ಮೋಸಮಾಡಿ ಯಾಮಾರಿಸಿದ್ದಾರೆ ಎಂದು ಅಲವತ್ತುಕೊಳ್ಳುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27