ಶ್ರೀನಿವಾಸಪುರ:ಪೋಲಿಸರೆಂದು ನಂಬಿಸಿ ವೃದ್ಧೆಯ ಮಾಂಗಲ್ಯ ಸರ ಅಪಹರಿಸಿರುವ ಘಟನೆ ಪಟ್ಟಣದ ಜನಬಿಡದಿ ವೃತ್ತ ಆಗಿರುವ ಪವನ್ ಆಸ್ಪತ್ರೆ ಬಳಿ ನಡೆದಿದೆ.
ಕಲ್ಲೂರು ಗ್ರಾಮದ ವೃದ್ದೆ ವೆಂಕಟಲಕ್ಷ್ಮಮ್ಮ ಮನೆಗೆ ಸರಕು ಖರೀದಿಸಲು ಆಸ್ಪತ್ರೆ ವೃತ್ತದ ಬಳಿ ನಡೆದು ಹೋಗುತ್ತಿರುವಾಗ ಅಪರಿಚಿತರು ವೆಂಕಟಲಕ್ಷ್ಮಮ್ಮನನ್ನು ಪರಿಚಿತರಂತೆ ಮಾತನಾಡಿ ಕಳ್ಳತನಗಳು ಹೆಚ್ಚಾಗುತ್ತಿವೆ ಮಾಂಗಲ್ಯ ಸರ ತೆಗೆದು ಬ್ಯಾಗ್ ನಲ್ಲಿ ಇಟ್ಟು ಕೊಳ್ಳಿ ಎಂದು ವೃದ್ದೆ ಕತ್ತಿನಲ್ಲಿದ್ದ ಬಂಗಾರದ ಸರವನ್ನು ತೆಗಿಸಿ ಬ್ಯಾಗ್ ನಲ್ಲಿ ಇಡಿಸಲು ಸಹಾಯ ಮಾಡುವರಂತೆ ಮಾಡಿ ಸರವನ್ನು ಎಗರಿಸಿದ್ದಾರೆ, ಇದಾದ ನಂತರ ಬ್ಯಾಗಲ್ಲಿ ಬಂಗಾರದ ಸರ ಇರುವುದನ್ನು ಖಾತ್ರಿ ಪಡಿಸಿಕೊಳ್ಳಲು ವೃದ್ದೆ ಪರಿಚಯಸ್ಥರ ಅಂಗಡಿ ಬಳಿ ಹೋಗಿ ಬ್ಯಾಗ್ ತಗೆದು ನೋಡಿದಾಗ ಮಾಂಗಲ್ಯ ಸರ ಇಲ್ಲದನ್ನು ನೋಡಿ ಗಾಭರಿಯಾಗಿದ್ದಾರೆ ಕೂಡಲೆ ಪರಿಚಯಸ್ಥರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೃದ್ದೆ ಹೇಳುವಂತೆ ಪೊಲೀಸರೆಂದು ನಂಬಿಸಿ ಪರಿಚಯಸ್ಥರಂತೆ ನಟಿಸಿ ನಾನು ಧರಿಸಿದ್ದ 40ಗ್ರಾಂ ಮಾಂಗಲ್ಯ ಚೈನು 6.5 ಗ್ರಾಂ ತಾಳಿ ಬಟ್ಟುಗಳ ಅಂದಾಜು 3ಲಕ್ಷ ಮೌಲ್ಯದ ಸರವನ್ನು ನಂಬಿಸಿ ಮೋಸಮಾಡಿ ಯಾಮಾರಿಸಿದ್ದಾರೆ ಎಂದು ಅಲವತ್ತುಕೊಳ್ಳುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



