ನ್ಯೂಜ್ ಡೆಸ್ಕ್: ತೆಲಂಗಾಣದ ಉದ್ಯಮಿಯೊಬ್ಬರು ಹೊಸದಾಗಿ ಹೆಲಿಕಾಪ್ಟರ್ ಖರಿದಿಸಿ ಅದಕ್ಕೆ ಪೂಜೆ ಮಾಡಿಸಲು ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ದ್ವಿಚಕ್ರವಾಹನಕ್ಕೊ, ನಾಲ್ಕು ಚಕ್ರದ ಕಾರು ಟೆಂಪೊ ವಾಹನಗಳನ್ನು ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸುವುದು ಮಾಮೂಲು, ಆದರೆ ತೆಲಂಗಾಣ ರಾಜ್ಯದ ಕರಿಂನಗರ ಪ್ರತಿಮಾ ಮೆಡಿಕಲ್ ಕಾಲೇಜು ಮಾಲಿಕ ಮತ್ತು ತೆಲಂಗಾಣದ ಪ್ರಭಾವಿ ಉದ್ಯಮಿ ಪ್ರತಿಮಾ ಗ್ರೂಪ್ಸ್ ಮಾಲೀಕ ಬೋಯನಪಲ್ಲಿ ಶ್ರೀನಿವಾಸ್ ರಾವ್ ಏರ್ಬಸ್ ಎಸಿಹೆಚ್ 135 ಹೆಲಿಕಾಪ್ಟರ್ ಅನ್ನು 5.7 ಮಿಲಿಯನ್ ಯುಎಸ್ ಡಾಲರ್ ಕೊಟ್ಟು ಖರೀದಿಸಿದ್ದಾರೆ ಅದಕ್ಕೆ ಪೂಜೆ ಸಲ್ಲಿಸಲು ತಮ್ಮ ಇಷ್ಟ ದೈವ ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದು ಅದಕ್ಕೆ ವಾಹನ ಪೂಜೆ ಮಾಡಿಸಿದ್ದಾರೆ.!
ಕುಟುಂಬಸಮೇತವಾಗಿ ಶ್ರೀನಿವಾಸ್ ರಾವ್ ಹೆಲಿಕಾಪ್ಟರ್ನಲ್ಲಿಯೇ ದೇವಸ್ಥಾನಕ್ಕೆ ಬಂದು ಮೂವರು ಅರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ.
ಉದ್ಯಮಿ ಶ್ರೀನಿವಾಸ್ ರಾವ್ ತೆಲಂಗಾಣದ ಪ್ರಭಾವಿ ಬಿಜೆಪಿ ಮುಖಂಡ ಮಾಜಿ ಕೇಂದ್ರ ಸಚಿವ ಹಾಗು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ಸಂಬಂಧಿಯಾಗಿದ್ದು,ಪೂಜಾ ಕಾರ್ಯಕ್ರಮದಲ್ಲಿ ವಿದ್ಯಾಸಾಗರ್ ಅವರೂ ಉಪಸ್ಥಿತರಿದ್ದರು. ಪ್ರತಿಮಾ ಗ್ರೂಪ್ಸ್ ಇನ್ಫ್ರಾಸ್ಟ್ರಕ್ಚರ್, ಇಂಧನ, ಟೆಲಿಕಾಂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳನ್ನೂ ಹೊಂದಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14