ನ್ಯೂಜ್ ಡೆಸ್ಕ್: ತೆಲಂಗಾಣದ ಉದ್ಯಮಿಯೊಬ್ಬರು ಹೊಸದಾಗಿ ಹೆಲಿಕಾಪ್ಟರ್ ಖರಿದಿಸಿ ಅದಕ್ಕೆ ಪೂಜೆ ಮಾಡಿಸಲು ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ದ್ವಿಚಕ್ರವಾಹನಕ್ಕೊ, ನಾಲ್ಕು ಚಕ್ರದ ಕಾರು ಟೆಂಪೊ ವಾಹನಗಳನ್ನು ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸುವುದು ಮಾಮೂಲು, ಆದರೆ ತೆಲಂಗಾಣ ರಾಜ್ಯದ ಕರಿಂನಗರ ಪ್ರತಿಮಾ ಮೆಡಿಕಲ್ ಕಾಲೇಜು ಮಾಲಿಕ ಮತ್ತು ತೆಲಂಗಾಣದ ಪ್ರಭಾವಿ ಉದ್ಯಮಿ ಪ್ರತಿಮಾ ಗ್ರೂಪ್ಸ್ ಮಾಲೀಕ ಬೋಯನಪಲ್ಲಿ ಶ್ರೀನಿವಾಸ್ ರಾವ್ ಏರ್ಬಸ್ ಎಸಿಹೆಚ್ 135 ಹೆಲಿಕಾಪ್ಟರ್ ಅನ್ನು 5.7 ಮಿಲಿಯನ್ ಯುಎಸ್ ಡಾಲರ್ ಕೊಟ್ಟು ಖರೀದಿಸಿದ್ದಾರೆ ಅದಕ್ಕೆ ಪೂಜೆ ಸಲ್ಲಿಸಲು ತಮ್ಮ ಇಷ್ಟ ದೈವ ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದು ಅದಕ್ಕೆ ವಾಹನ ಪೂಜೆ ಮಾಡಿಸಿದ್ದಾರೆ.!
ಕುಟುಂಬಸಮೇತವಾಗಿ ಶ್ರೀನಿವಾಸ್ ರಾವ್ ಹೆಲಿಕಾಪ್ಟರ್ನಲ್ಲಿಯೇ ದೇವಸ್ಥಾನಕ್ಕೆ ಬಂದು ಮೂವರು ಅರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ.
ಉದ್ಯಮಿ ಶ್ರೀನಿವಾಸ್ ರಾವ್ ತೆಲಂಗಾಣದ ಪ್ರಭಾವಿ ಬಿಜೆಪಿ ಮುಖಂಡ ಮಾಜಿ ಕೇಂದ್ರ ಸಚಿವ ಹಾಗು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ಸಂಬಂಧಿಯಾಗಿದ್ದು,ಪೂಜಾ ಕಾರ್ಯಕ್ರಮದಲ್ಲಿ ವಿದ್ಯಾಸಾಗರ್ ಅವರೂ ಉಪಸ್ಥಿತರಿದ್ದರು. ಪ್ರತಿಮಾ ಗ್ರೂಪ್ಸ್ ಇನ್ಫ್ರಾಸ್ಟ್ರಕ್ಚರ್, ಇಂಧನ, ಟೆಲಿಕಾಂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳನ್ನೂ ಹೊಂದಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



