ನ್ಯೂಜ್ ಡೆಸ್ಕ್: ತೆಲಂಗಾಣದ ಉದ್ಯಮಿಯೊಬ್ಬರು ಹೊಸದಾಗಿ ಹೆಲಿಕಾಪ್ಟರ್ ಖರಿದಿಸಿ ಅದಕ್ಕೆ ಪೂಜೆ ಮಾಡಿಸಲು ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ದ್ವಿಚಕ್ರವಾಹನಕ್ಕೊ, ನಾಲ್ಕು ಚಕ್ರದ ಕಾರು ಟೆಂಪೊ ವಾಹನಗಳನ್ನು ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸುವುದು ಮಾಮೂಲು, ಆದರೆ ತೆಲಂಗಾಣ ರಾಜ್ಯದ ಕರಿಂನಗರ ಪ್ರತಿಮಾ ಮೆಡಿಕಲ್ ಕಾಲೇಜು ಮಾಲಿಕ ಮತ್ತು ತೆಲಂಗಾಣದ ಪ್ರಭಾವಿ ಉದ್ಯಮಿ ಪ್ರತಿಮಾ ಗ್ರೂಪ್ಸ್ ಮಾಲೀಕ ಬೋಯನಪಲ್ಲಿ ಶ್ರೀನಿವಾಸ್ ರಾವ್ ಏರ್ಬಸ್ ಎಸಿಹೆಚ್ 135 ಹೆಲಿಕಾಪ್ಟರ್ ಅನ್ನು 5.7 ಮಿಲಿಯನ್ ಯುಎಸ್ ಡಾಲರ್ ಕೊಟ್ಟು ಖರೀದಿಸಿದ್ದಾರೆ ಅದಕ್ಕೆ ಪೂಜೆ ಸಲ್ಲಿಸಲು ತಮ್ಮ ಇಷ್ಟ ದೈವ ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದು ಅದಕ್ಕೆ ವಾಹನ ಪೂಜೆ ಮಾಡಿಸಿದ್ದಾರೆ.!
ಕುಟುಂಬಸಮೇತವಾಗಿ ಶ್ರೀನಿವಾಸ್ ರಾವ್ ಹೆಲಿಕಾಪ್ಟರ್ನಲ್ಲಿಯೇ ದೇವಸ್ಥಾನಕ್ಕೆ ಬಂದು ಮೂವರು ಅರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ.
ಉದ್ಯಮಿ ಶ್ರೀನಿವಾಸ್ ರಾವ್ ತೆಲಂಗಾಣದ ಪ್ರಭಾವಿ ಬಿಜೆಪಿ ಮುಖಂಡ ಮಾಜಿ ಕೇಂದ್ರ ಸಚಿವ ಹಾಗು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ಸಂಬಂಧಿಯಾಗಿದ್ದು,ಪೂಜಾ ಕಾರ್ಯಕ್ರಮದಲ್ಲಿ ವಿದ್ಯಾಸಾಗರ್ ಅವರೂ ಉಪಸ್ಥಿತರಿದ್ದರು. ಪ್ರತಿಮಾ ಗ್ರೂಪ್ಸ್ ಇನ್ಫ್ರಾಸ್ಟ್ರಕ್ಚರ್, ಇಂಧನ, ಟೆಲಿಕಾಂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳನ್ನೂ ಹೊಂದಿದೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27