ನ್ಯೂಜ್ ಡೆಸ್ಕ್:ಕರ್ನಾಟಕ ವಿಧಾನಸಭೆ ಚುನಾವಣಾ ವೇಳಾಪಟ್ಟಿಯ ದಿನಾಂಕ ಪ್ರಕಟವಾಗಿದೆ ಎಂದು ಸಾಮಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಮಾಹಿತಿಯುಳ್ಳ ವೇಳಾಪಟ್ಟಿಯ ಪೋಸ್ಟರ್ ಸತ್ಯಾಸತ್ಯತೆ ಇಲ್ಲಿದೆ.
ಕರ್ನಾಟಕ ವಿಧಾನಸಭೆಗೆ ಚುನಾವಣೆ ಸಿದ್ದತೆಗಳು ನಡೆಯುತ್ತಿದೆ ವೇಳಾ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ವೇಳಾ ಪಟ್ಟಿಯೊಂದನ್ನು ಹಂಚಿಕೊಂಡಿದ್ದು ಎಲ್ಲಡೇ ವೈರಲ್ ಆಗಿದ್ದು ನಕಲಿ ವೇಳಾಪಟ್ಟಿಯಲ್ಲಿರುವಂತೆ ಚುನಾವಣೆ ಮಾರ್ಚ್ 27ರಿಂದ ನೀತಿ ಸಂಹಿತಿ ಜಾರಿ, ಏಪ್ರಿಲ್ 17, ಚುನಾವಣಾ ಅಧಿಸೂಚನೆ ಪ್ರಕಟ, ಏಪ್ರಿಲ್ 26 ರಿಂದ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ, ಏಪ್ರಿಲ್ 27 ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ,ಮೇ12 ಕ್ಕೆ ಮತದಾನ ನಡೆಯಲಿದ್ದು, ಮೇ 15ಕ್ಕೆ ಮತ ಎಣಿಕೆ ಕಾರ್ಯನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬ ಮಾಹಿತಿ ಇರುವಂತ ಪೋಸ್ಟ್ರ್ ಹರಿದಾಡುತ್ತಿದೆ.ನಕಲಿ ವೇಳಾಪಟ್ಟಿಯಂತೆ ಇಡಿ ಕರ್ನಾಟಕದಲ್ಲಿ ಒಂದೇ ಹಂತದ ಚುನಾವಣೆ ನಡೆಯುವ ರಿತಿ ಇದೆ.
ಆದರೆ ಅದರ ಸತ್ಯಾಸತ್ಯತೆ ಇಲ್ಲಿದೆ
ಸಾಮಾಜಿಕ ಜಾಲತಾಣಗಳಲ್ಲಿ ಹಂಚಿರುವಂತ 2023ರ ಚುನಾವಣಾ ವೇಳಾ ಪಟ್ಟಿಯ ನಿಜಾಂಶ ಪರಿಶೀಲಿಸಿದರೆ ನಕಲಿ ವೇಳಾ ಪಟ್ಟಿ ಎಂದು ಹೇಳಲಾಗಿದೆ.ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಈ ಹಿಂದಿನ 2018ರ ಹಳೆಯ ವೇಳಾಪಟ್ಟಿಯನ್ನೇ ಎಡಿಟ್(EDIT) ಮಾಡಲಾಗಿದ್ದು ಫೋಟೊದಲ್ಲಿ 2018 ಇರುವ ಕಡೆ 2023 ಎಂದು ನಮೂದಿಸಿ ಎಡಿಟ್ ಮಾಡಲಾಗಿದೆ. ಎಡಿಟ್ ಮಾಡಿದ ಫೋಟೊವನ್ನೇ ಎಲ್ಲೆಡೆ ಶೇರ್ ಮಾಡಿದ ಪರಿಣಾಮ,ನಕಲಿಯನ್ನು ಅಸಲಿ ಎಂದು ನಂಬಿದ ಜನತೆ ಅದನ್ನೇ 2023 ಚುನಾವಣೆ ವೇಳಾಪಟ್ಟಿ ಎಂದು ನಂಬಿ ಜಾಲತಾಣಗಳಲ್ಲಿ ಹಂಚಿಕೊಂಡ ಪರಿಣಾಮ ಓಡಾಡುತ್ತಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27