ಶ್ರೀನಿವಾಸಪುರ:ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೊಲೇರೋ ಅತಿ ವೇಗವಾಗಿ ಚಾಲನೆಯಿಂದ ವಾಹನ ರೈಲ್ವೆ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಮುಗುಚಿ ಬಿದ್ದು ವಾಹನದಲ್ಲಿದ್ದ ಮೂವರು ಕಾರ್ಮಿಕರು ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ದೊಡಮಲದೊಡ್ಡಿ ರೈಲ್ವೆ ಬ್ರಿಡ್ಜ್ ಬಳಿ ಘಟನೆ ಜರುಗಿದ್ದು, ಆಂದ್ರದ ಚೆಂಬಕೂರು ಗ್ರಾಮದ ಕೂಲಿ ಕಾರ್ಮಿಕರಾದ ವೆಂಕಟಮ್ಮ (55), ಮುನಿಯಪ್ಪ (56) ಶ್ರೀನಿವಾಸ@ಸೀನು (27) ಎಂಬುವರು ಮೃತಪಟ್ಟಿದ್ದಾರೆ.
ಚೆಂಬಕೂರಿನಿಂದ ಹುಣಸೆ ಮರದಲ್ಲಿ ಕಾಯಿ ಉದುರಿಸುವ ಕೆಲಸಕ್ಕೆ 12 ಮಂದಿ ಕೂಲಿ ಕಾರ್ಮಿಕರನ್ನು ಶ್ರೀನಿವಾಸಪುರ-ಚಿಂತಾಮಣಿ ನಡುವಿನ ಆನೂರು ಗ್ರಾಮಕ್ಕೆ ಕರೆತಂದಿದ್ದರು, ಕೆಲಸ ಮುಗಿಸಿದ ಕೂಲಿ ಕಾರ್ಮಿಕರನ್ನು ಅವರ ಊರಾದ ಆಂಧ್ರದ ಚಂಬಕೂರಿಗೆ ಮತ್ತೆ ಬೊಲೆರೋ ವಾಹನದಲ್ಲಿ ಸಂಜೆ ವಾಪಸ್ ಕರೆದುಕೊಂಡು ಹೋಗುತ್ತಿರುವಾಗ ದೊಡಮದೊಡ್ಡಿ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ವಾಹನ ಅತಿ ವೇಗವಾಗಿ ಚಲಾಯಿಸುತ್ತಿದ್ದದ್ದರಿಂದ ಬ್ರೇಕ್ ಫೈಲೂರ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದು ಬೊಲೆರೋ ರಸ್ತೆ ಮೇಲೆ ಮುಗಿಚಿ ಬಿದಿದ್ದೆ. ಬಿದ್ದ ರಭಸಕ್ಕೆ ವಾಹನದಲ್ಲಿದ್ದ ಕಾರ್ಮಿಕರಲ್ಲಿ ಮೂವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಪಘಾತ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



