ಶ್ರೀನಿವಾಸಪುರ:ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೊಲೇರೋ ಅತಿ ವೇಗವಾಗಿ ಚಾಲನೆಯಿಂದ ವಾಹನ ರೈಲ್ವೆ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಮುಗುಚಿ ಬಿದ್ದು ವಾಹನದಲ್ಲಿದ್ದ ಮೂವರು ಕಾರ್ಮಿಕರು ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ದೊಡಮಲದೊಡ್ಡಿ ರೈಲ್ವೆ ಬ್ರಿಡ್ಜ್ ಬಳಿ ಘಟನೆ ಜರುಗಿದ್ದು, ಆಂದ್ರದ ಚೆಂಬಕೂರು ಗ್ರಾಮದ ಕೂಲಿ ಕಾರ್ಮಿಕರಾದ ವೆಂಕಟಮ್ಮ (55), ಮುನಿಯಪ್ಪ (56) ಶ್ರೀನಿವಾಸ@ಸೀನು (27) ಎಂಬುವರು ಮೃತಪಟ್ಟಿದ್ದಾರೆ.
ಚೆಂಬಕೂರಿನಿಂದ ಹುಣಸೆ ಮರದಲ್ಲಿ ಕಾಯಿ ಉದುರಿಸುವ ಕೆಲಸಕ್ಕೆ 12 ಮಂದಿ ಕೂಲಿ ಕಾರ್ಮಿಕರನ್ನು ಶ್ರೀನಿವಾಸಪುರ-ಚಿಂತಾಮಣಿ ನಡುವಿನ ಆನೂರು ಗ್ರಾಮಕ್ಕೆ ಕರೆತಂದಿದ್ದರು, ಕೆಲಸ ಮುಗಿಸಿದ ಕೂಲಿ ಕಾರ್ಮಿಕರನ್ನು ಅವರ ಊರಾದ ಆಂಧ್ರದ ಚಂಬಕೂರಿಗೆ ಮತ್ತೆ ಬೊಲೆರೋ ವಾಹನದಲ್ಲಿ ಸಂಜೆ ವಾಪಸ್ ಕರೆದುಕೊಂಡು ಹೋಗುತ್ತಿರುವಾಗ ದೊಡಮದೊಡ್ಡಿ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ವಾಹನ ಅತಿ ವೇಗವಾಗಿ ಚಲಾಯಿಸುತ್ತಿದ್ದದ್ದರಿಂದ ಬ್ರೇಕ್ ಫೈಲೂರ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದು ಬೊಲೆರೋ ರಸ್ತೆ ಮೇಲೆ ಮುಗಿಚಿ ಬಿದಿದ್ದೆ. ಬಿದ್ದ ರಭಸಕ್ಕೆ ವಾಹನದಲ್ಲಿದ್ದ ಕಾರ್ಮಿಕರಲ್ಲಿ ಮೂವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಪಘಾತ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



