ಶ್ರೀನಿವಾಸಪುರ:ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಗ್ರಾಮದಲ್ಲಿ ಕಟ್ಟಿದ್ದ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಪಂಚಾಯತಿ ಸಿಬ್ಬಂದಿ ತೆರವು ಗೊಳಿಸಿ ಅವುಗಳನ್ನು ಗ್ರಾಮದ ಸ್ಮಶಾನದಲ್ಲಿ ಎಸೆದು ಉದ್ದಟತನ ಮೆರೆದಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮದ ಮನೆಗಳ ಮೇಲೆ ಕಟ್ಟಿದ್ದ ಕೇಸರಿ ಧ್ವಜ ರಾಮನ ಭಾವಚಿತ್ರದ ಪ್ಲೆಕ್ಸ್ಗಳನ್ನು ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ತರಾತುರಿಯಲ್ಲಿ ತೆರವು ಮಾಡಿದ ಪಂಚಾಯಿತಿ ಸಿಬ್ಬಂದಿ ಸ್ಮಶಾನಕ್ಕೆ ಎಸೆದಿದ್ದಾರೆ ಎಂದು ತಾಲೂಕಿನ ಅಡ್ಡಗಲ್ ಪಂಚಾಯತಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ತೆರವು ವಿಚಾರ ರಾದ್ದಾಂತವಾಗುತ್ತಿದ್ದಂತೆ ಗೌವನಪಲ್ಲಿ ಠಾಣ ಪೋಲಿಸರು ತಕ್ಷಣ ಗ್ರಾಮಕ್ಕೆ ಆಗಮಿಸಿ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಕೂರಿಸಿ ಮಾತನಾಡಿ ಸ್ಮಶಾನಕ್ಕೆ ಎಸೆದಿದ್ದ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಅಲ್ಲಿಂದ ತೆರವು ಮಾಡಿ ಗ್ರಾಮಸ್ಥರ ಸಲಹೆಯಂತೆ ನೀರಿನಲ್ಲಿ ವಿಸರ್ಜಿಸಲು ಸೂಚಿಸಿದ್ದಾಗಿ ಪೋಲಿಸರು ಹೇಳುತ್ತಾರೆ.
ತೆರುವಿಗೆ ಎರಡು ತಿಂಗಳು ಬೇಕಾಯಿತ?
ಇವುಗಳನ್ನು ತೆರವು ಮಾಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಎರಡು ತಿಂಗಳು ಬೇಕಾಯಿತ ಎಂದು ಪ್ರಶ್ನಿಸುವ ಗ್ರಾಮದ ಯುವಕರು ಇದು ಇಲ್ಲಿನ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಬೇಜವಬ್ದಾರಿ ನಡವಳಿಕೆಯ ಪರಿಣಾಮ ಗ್ರಾಮದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಿದೆ ಎನ್ನುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



