ಶ್ರೀನಿವಾಸಪುರ:ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಗ್ರಾಮದಲ್ಲಿ ಕಟ್ಟಿದ್ದ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಪಂಚಾಯತಿ ಸಿಬ್ಬಂದಿ ತೆರವು ಗೊಳಿಸಿ ಅವುಗಳನ್ನು ಗ್ರಾಮದ ಸ್ಮಶಾನದಲ್ಲಿ ಎಸೆದು ಉದ್ದಟತನ ಮೆರೆದಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮದ ಮನೆಗಳ ಮೇಲೆ ಕಟ್ಟಿದ್ದ ಕೇಸರಿ ಧ್ವಜ ರಾಮನ ಭಾವಚಿತ್ರದ ಪ್ಲೆಕ್ಸ್ಗಳನ್ನು ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ತರಾತುರಿಯಲ್ಲಿ ತೆರವು ಮಾಡಿದ ಪಂಚಾಯಿತಿ ಸಿಬ್ಬಂದಿ ಸ್ಮಶಾನಕ್ಕೆ ಎಸೆದಿದ್ದಾರೆ ಎಂದು ತಾಲೂಕಿನ ಅಡ್ಡಗಲ್ ಪಂಚಾಯತಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ತೆರವು ವಿಚಾರ ರಾದ್ದಾಂತವಾಗುತ್ತಿದ್ದಂತೆ ಗೌವನಪಲ್ಲಿ ಠಾಣ ಪೋಲಿಸರು ತಕ್ಷಣ ಗ್ರಾಮಕ್ಕೆ ಆಗಮಿಸಿ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಕೂರಿಸಿ ಮಾತನಾಡಿ ಸ್ಮಶಾನಕ್ಕೆ ಎಸೆದಿದ್ದ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಅಲ್ಲಿಂದ ತೆರವು ಮಾಡಿ ಗ್ರಾಮಸ್ಥರ ಸಲಹೆಯಂತೆ ನೀರಿನಲ್ಲಿ ವಿಸರ್ಜಿಸಲು ಸೂಚಿಸಿದ್ದಾಗಿ ಪೋಲಿಸರು ಹೇಳುತ್ತಾರೆ.
ತೆರುವಿಗೆ ಎರಡು ತಿಂಗಳು ಬೇಕಾಯಿತ?
ಇವುಗಳನ್ನು ತೆರವು ಮಾಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಎರಡು ತಿಂಗಳು ಬೇಕಾಯಿತ ಎಂದು ಪ್ರಶ್ನಿಸುವ ಗ್ರಾಮದ ಯುವಕರು ಇದು ಇಲ್ಲಿನ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಬೇಜವಬ್ದಾರಿ ನಡವಳಿಕೆಯ ಪರಿಣಾಮ ಗ್ರಾಮದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಿದೆ ಎನ್ನುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27