ನ್ಯೂಜ್ ಡೆಸ್ಕ್: ಭಾರತೀಯ ಜನತಾಪಕ್ಷದ ಎಂಎಲ್ಸಿ ಕೇಶವ ಪ್ರಸಾದ್ ಅವರ ವಾಹನವನ್ನು ಟೋಲ್ ಸಿಬ್ಬಂದಿ ತಡೆದು, ಅವರ ಪಾಸ್ ಮತ್ತು ಮೊಬೈಲ್ ಕಿತ್ತುಕೊಂಡು ಅನುಚಿತವಾಗಿ ವರ್ತಿಸಿ ದರ್ಪ ಮೆರೆದಿರುವ ಘಟನೆ ನಡೆದಿದ್ದು ಸ್ಥಳೀಯ ಪೋಲಿಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಗೊಂದಲ ಸೃಷ್ಟಿಸಿದ ಟೋಲ್ ಸಿಬ್ಬಂದಿ ವರ್ತನೆಗೆ ಎಂಎಲ್ಸಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆ ಭಾನುವಾರ ಕರ್ನಾಟಕದ ವಿಜಯಪುರ ನಗರದ ಹೊರವಲಯದ ಬೆಂಗಳೂರು-ಸೋಲಾಪುರ ಹೆದ್ದಾರಿಯ ಟೋಲ್ ಗೇಟ್ನಲ್ಲಿ ನಡೆದಿದೆ ಎನ್ನಲಾಗಿದೆ.ಟೋಲ್ ಸಿಬ್ಬಂದಿ ಎಂಎಲ್ಸಿ ಅವರ ಪಾಸ್ ಮತ್ತು ಮೊಬೈಲ್ ಅನ್ನು ದರ್ಪದಿಂದ ಕಸಿದುಕೊಂಡು,ನೀವು ಎಂಎಲ್ಸಿ ಎಂದು ನಾವು ಹೇಗೆ ನಂಬಬೇಕು?ಎಂದು ಪ್ರಶ್ನಿಸಿ ಅನುಚಿತವಾಗಿ ವರ್ತಿಸಿದ್ದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಟೋಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಅವರು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿಗೆ ಫೋನ್ ಮೂಲಕ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಟೋಲ್ ಸ್ಥಳೀಯ ಮುಖ್ಯಸ್ಥರು ಆಗಮಿಸಿ ನಡೆದ ಘಟನೆ ಬಗ್ಗೆ ಎಂಎಲ್ಸಿ ಕೇಶವ ಪ್ರಸಾದ್ ವಿಷಾದ ವ್ಯಕ್ತಪಡಿಸಿರುವ ಬಗ್ಗೆ ಹೇಳಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



