ನ್ಯೂಜ್ ಡೆಸ್ಕ್: ಭಾರತೀಯ ಜನತಾಪಕ್ಷದ ಎಂಎಲ್ಸಿ ಕೇಶವ ಪ್ರಸಾದ್ ಅವರ ವಾಹನವನ್ನು ಟೋಲ್ ಸಿಬ್ಬಂದಿ ತಡೆದು, ಅವರ ಪಾಸ್ ಮತ್ತು ಮೊಬೈಲ್ ಕಿತ್ತುಕೊಂಡು ಅನುಚಿತವಾಗಿ ವರ್ತಿಸಿ ದರ್ಪ ಮೆರೆದಿರುವ ಘಟನೆ ನಡೆದಿದ್ದು ಸ್ಥಳೀಯ ಪೋಲಿಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಗೊಂದಲ ಸೃಷ್ಟಿಸಿದ ಟೋಲ್ ಸಿಬ್ಬಂದಿ ವರ್ತನೆಗೆ ಎಂಎಲ್ಸಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆ ಭಾನುವಾರ ಕರ್ನಾಟಕದ ವಿಜಯಪುರ ನಗರದ ಹೊರವಲಯದ ಬೆಂಗಳೂರು-ಸೋಲಾಪುರ ಹೆದ್ದಾರಿಯ ಟೋಲ್ ಗೇಟ್ನಲ್ಲಿ ನಡೆದಿದೆ ಎನ್ನಲಾಗಿದೆ.ಟೋಲ್ ಸಿಬ್ಬಂದಿ ಎಂಎಲ್ಸಿ ಅವರ ಪಾಸ್ ಮತ್ತು ಮೊಬೈಲ್ ಅನ್ನು ದರ್ಪದಿಂದ ಕಸಿದುಕೊಂಡು,ನೀವು ಎಂಎಲ್ಸಿ ಎಂದು ನಾವು ಹೇಗೆ ನಂಬಬೇಕು?ಎಂದು ಪ್ರಶ್ನಿಸಿ ಅನುಚಿತವಾಗಿ ವರ್ತಿಸಿದ್ದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಟೋಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಅವರು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿಗೆ ಫೋನ್ ಮೂಲಕ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಟೋಲ್ ಸ್ಥಳೀಯ ಮುಖ್ಯಸ್ಥರು ಆಗಮಿಸಿ ನಡೆದ ಘಟನೆ ಬಗ್ಗೆ ಎಂಎಲ್ಸಿ ಕೇಶವ ಪ್ರಸಾದ್ ವಿಷಾದ ವ್ಯಕ್ತಪಡಿಸಿರುವ ಬಗ್ಗೆ ಹೇಳಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



