ನ್ಯೂಜ್ ಡೆಸ್ಕ್: ಭಾರತೀಯ ಜನತಾಪಕ್ಷದ ಎಂಎಲ್ಸಿ ಕೇಶವ ಪ್ರಸಾದ್ ಅವರ ವಾಹನವನ್ನು ಟೋಲ್ ಸಿಬ್ಬಂದಿ ತಡೆದು, ಅವರ ಪಾಸ್ ಮತ್ತು ಮೊಬೈಲ್ ಕಿತ್ತುಕೊಂಡು ಅನುಚಿತವಾಗಿ ವರ್ತಿಸಿ ದರ್ಪ ಮೆರೆದಿರುವ ಘಟನೆ ನಡೆದಿದ್ದು ಸ್ಥಳೀಯ ಪೋಲಿಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಗೊಂದಲ ಸೃಷ್ಟಿಸಿದ ಟೋಲ್ ಸಿಬ್ಬಂದಿ ವರ್ತನೆಗೆ ಎಂಎಲ್ಸಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆ ಭಾನುವಾರ ಕರ್ನಾಟಕದ ವಿಜಯಪುರ ನಗರದ ಹೊರವಲಯದ ಬೆಂಗಳೂರು-ಸೋಲಾಪುರ ಹೆದ್ದಾರಿಯ ಟೋಲ್ ಗೇಟ್ನಲ್ಲಿ ನಡೆದಿದೆ ಎನ್ನಲಾಗಿದೆ.ಟೋಲ್ ಸಿಬ್ಬಂದಿ ಎಂಎಲ್ಸಿ ಅವರ ಪಾಸ್ ಮತ್ತು ಮೊಬೈಲ್ ಅನ್ನು ದರ್ಪದಿಂದ ಕಸಿದುಕೊಂಡು,ನೀವು ಎಂಎಲ್ಸಿ ಎಂದು ನಾವು ಹೇಗೆ ನಂಬಬೇಕು?ಎಂದು ಪ್ರಶ್ನಿಸಿ ಅನುಚಿತವಾಗಿ ವರ್ತಿಸಿದ್ದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಟೋಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಅವರು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿಗೆ ಫೋನ್ ಮೂಲಕ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಟೋಲ್ ಸ್ಥಳೀಯ ಮುಖ್ಯಸ್ಥರು ಆಗಮಿಸಿ ನಡೆದ ಘಟನೆ ಬಗ್ಗೆ ಎಂಎಲ್ಸಿ ಕೇಶವ ಪ್ರಸಾದ್ ವಿಷಾದ ವ್ಯಕ್ತಪಡಿಸಿರುವ ಬಗ್ಗೆ ಹೇಳಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



