ಶ್ರೀನಿವಾಸಪುರ: ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಆಯಾ ಶಾಲೆಗಳ ಹಳೇಯ ವಿಧ್ಯಾರ್ಥಿಗಳು ಸಹಕಾರ ನೀಡುವ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುವಂತೆ ಶ್ರೀರಂಗಪಟ್ಟಣದ ಪ್ರಥಮ ದರ್ಜೆ ಕಾಲೇಜು ಪ್ರಾದ್ಯಾಪಕ ಡಾ.ಶಿವಪ್ರಸಾದ್ ಹೇಳಿದರು ಅವರು ತಮ್ಮ ಸ್ವಗ್ರಾಮವಾದ ತಾಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಓದಿದ ಹಳೇಯ ವಿದ್ಯಾರ್ಥಿಗಳಲ್ಲಿ ಸಾಧನೆ ಮಾಡಿರುವಂತವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳನ್ನು ಉಳಸಿಕೊಳ್ಳುವಂತ ಆಂದೋಲನ ಎಲ್ಲಡೆ ಇದೆ,ಗ್ರಾಮೀಣ ಭಾಗದಲ್ಲಿ ಇದು ಪರಿಣಾಮಕಾರಿಯಾಗಿ ಜಾರಿಯಗಲು ಎಲ್ಲರ ಸಹಕಾರ ಬೇಕಿರುತ್ತದೆ ಎಂದರು.
ಸನ್ಮಾನ ಸ್ವೀಕರಿಸಿದ ಚಿಂತಾಮಣಿಯ ಉಪನ್ಯಾಸಕ ಡಾ.ಮುನಿರೆಡ್ದಿ ಮಾತನಾಡಿ ಸಾಧನೆ ಸುಲಭದ ಮಾತಲ್ಲ, ಸಾಧನೆಯ ಹಾದಿಯಲ್ಲಿ ಬರುವ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ಗುರಿ ತಲುಪುವವನೆ ನಿಜವಾದ ಸಾಧಕನಾಗುತ್ತಾನೆ ಇದು ಇತರರಿಗೆ ಪ್ರೇರಣೆ ಆಗಬೇಕು. ನಮ್ಮ ಸಾಧನೆ ಕಂಡು ಇತರರೂ ಸಂತಸ ಪಡಬೇಕು.ನಾವೂ ಸಹ ಹೀಗೆ ಸಾಧಿಸಬೇಕು ಎಂಬ ಛಲ ಅವರಲ್ಲಿ ಹುಟ್ಟಬೇಕು ಎಂದರು.
ಕೋಲಾರದ ಎಸ್.ಎನ್.ಆರ್ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ ಪಂಚಲಿಂಗ ಕ್ಷೇತ್ರ ಎಂದು ಖ್ಯಾತ ಪಡೆದಿರುವ ನಂಬಿಹಳ್ಳಿ ಪ್ರೌಡಶಾಲೆ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿದೆ ಈ ಪರಂಪರೆಯನ್ನು ಇಲ್ಲಿನ ಉಪಾದ್ಯಾಯರು ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ವಿನಂತಿಸಿದ ಅವರು ವಿದ್ಯಾರ್ಥಿಗಳು ಸಹ ಸೋಲೇ ಗೆಲುವಿಗೆ ಮೆಟ್ಟಿಲು ಎಂಬ ಭಾವನೆಯಿಂದ ಪ್ರಯತ್ನ ಬಿಡದೆ ಆಶಾವಾದಿಗಳಾಗಿ ನಿರ್ದೀಷ್ಟ ಗುರಿಯಿಟ್ಟುಕೊಂಡು ಸಾಧಿಸುವ ಮೂಲಕ ಶಾಲೆಯ ಹೆಸರು ಘನತೆಯನ್ನು ಉಳಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಪ್ರೌಡಶಾಲೆ ಮುಖ್ಯೋಪಾದ್ಯಾಯ ನಾರಯಣಸ್ವಾಮಿ ಸೇರಿದಂತೆ ನಾಲ್ಕು ಜನರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ಸುಬ್ರಮಣಿ,ಮುಖ್ಯೊಪಾದ್ಯಾಯರಾದ ಐಮಾರೆಡ್ಡಿ,ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಪ್ಪ,ರಾಮಚಂದ್ರಪ್ಪ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26