ಶ್ರೀನಿವಾಸಪುರ:ಅತಿವೇಗದದಿಂದ ತೆರಳುತ್ತಿದ್ದ ಮಹಿಂದ್ರಾ ಎಸ್.ಯು.ವಿ ಕಾರು ಡಿಕ್ಕಿ ಹೋಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಗೌವನಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಕಡಪಾ-ಬೆಂಗಳೂರು ಹೆದ್ದಾರಿಯಲ್ಲಿ ತಾಡಿಗೋಳ್ ಕ್ರಾಸ್ ಬಳಿ ಇಂದು ನಡೆದಿದೆ.
ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರರನ್ನು ತಾಡಿಗೋಳ್ ಗ್ರಾಮದ ಶಂಕರಪ್ಪ(38) ಹಾಗು ಮ್ಯಾಕಲಗಡ್ಡ ಗ್ರಾಮದ ಮುನಿಶಾಮಿ(40) ಎಂದು ಗುರುತಿಸಲಾಗಿದೆ.
ಆಂಧ್ರದ ಮದನಪಲ್ಲಿಯಿಂದ ಬೆಂಗಳೂರಿಗೆ ಹೊರಟಿದ್ದ ಮಹಿಂದ್ರಾ ಹೈಬ್ರಿಡ್ ಕಾರು ತಾಡಿಗೊಳ್ ಕ್ರಾಸ್ ಬಳಿ ಜಲ್ಲಿ ಟಿಪ್ಪರ್ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಅತಿಯಾದ ವೇಗದಲ್ಲಿ ಸಾಗುತ್ತಿದ್ದ ಕಾರು ರಸ್ತೆ ಪಕ್ಕದ ಟಮ್ಯಾಟೋ ತೋಟಕ್ಕೆ ನುಗ್ಗಿದೆ.ಬೈಕನಲ್ಲಿದ್ದ ಇಬ್ಬರು ಸ್ಥಳದಲ್ಲಿಯೆ ಸಾವನಪ್ಪಿರುತ್ತಾರೆ.
ಈ ಬಗ್ಗೆ ಗೌವನಪಲ್ಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರ ರಾಜಕಾರಣಿ ಕಾರು!
ಅತಿವೇಗದ ಚಾಲನೆಯಿಂದ ಇಬ್ಬರು ಗ್ರಾಮಸ್ಥರ ಸಾವಿಗೆ ಕಾರಣವಾದ ಮಹಿಂದ್ರಾ XUV ಕಾರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಯಚೂಟಿಯ ಆಡಳಿತ ರೂಡ ರಾಜಕಾರಣಿಯದು ಎನ್ನಲಾಗುತ್ತಿದೆ ಕಾರು ಬೆಂಗಳೂರಿಗೆ ತೆರಳುತ್ತಿದ್ದು ಕಾರಿನ ಮುಂಬಾಗದ ಗಾಜಿನ ಮೇಲೆ GOVT WHIP(ಸರ್ಕಾರಿ ಸಚೇತಕ) ಎಂದು ಸ್ಟೀಕರ್ ಅಂಟಿಸಲಾಗಿದೆ ಈ ಬಗ್ಗೆ ಗೌವನಪಲ್ಲಿ ಠಾಣಾಧಿಕಾರಿಯನ್ನು ಕೇಳಿದರೆ ವಾಹನದ ಸಂಖ್ಯೆ AP13AC6570 ಇದೆ ಸರ್ ಆದರೆ ಈ ಬಗ್ಗೆ ನಮಗೇನೂ ತಿಳಿಯದು ಎಂದು ಜಾರಿಕೊಳ್ಳುವ ಉತ್ತರ ಹೇಳುತ್ತಾರೆ
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27