ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿದ ಸ್ಲೀಪರ್ ಕೋಚ್ ಖಾಸಗಿ ಬಸ್ ಪಕ್ಕದ ಹಳ್ಳಕ್ಕೆ ಉರಳಿ ಬಿದ್ದು ಒಬ್ಬರು ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಂಧ್ರದ ಪ್ರಕಾಶಂ ಜಿಲ್ಲೆಯ ಪುನಗೋಡು ಗ್ರಾಮದ ಅನಿಲ್ (22) ಎಂದು ಗುರತಿಸಲಾಗಿದೆ. ಖಾಸಗಿ ಬಸ್ ಶ್ರೀ ಶ್ರೀನಿವಾಸ ಬಸ್ ಟ್ರಾವಲ್ಸ್ ಬೆಂಗಳೂರಿನಿಂದ ಆಂಧ್ರದ ಒಂಗೋಲ್ ನಗರಕ್ಕೆ ಮದನಪಲ್ಲಿ ಮಾರ್ಗವಾಗಿ ಹೋಗಲು ರಾಯಲ್ಪಾಡು ಬಳಿ ಚಲಿಸುತ್ತಿದ್ದಾಗ ಭಾನುವಾರ ಮದ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಾಯಲ್ಪಾಡು ತಿರುವಿನಲ್ಲಿ ಹಳ್ಳಕ್ಕೆ ಉರಳಿ ಬಿದ್ದಿದೆ ಬಸ್ಸಿನಲ್ಲಿದ್ದ ಸುಮಾರು 17 ಮಂದಿ ಪ್ರಯಾಣಿಕರಲ್ಲಿ ಮೃತ ಯುವಕನ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೆ ಮೃತ ಪಟ್ಟಿರುವುದಾಗಿ ಹೇಳಲಾಗಿದೆ.
ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ದೇಹ ಚಿದ್ರಚಿದ್ರ
ಬೆಂಗಳೂರು-ಮದನಪಲ್ಲಿ ಹೆದ್ದಾರಿಯಲ್ಲಿ ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಗುದ್ದಿಕೊಂಡು ಹೋಗಿದೆ ವಾಹನ ಡಿಕ್ಕಿಯಾದ ರಭಸಕ್ಕೆ ವ್ಯಕ್ತಿ ದೇಹ ಚಿದ್ರಚಿದ್ರವಾಗಿದ್ದು ಇದೊಂದು ಭಿಕರ ಅಂಪಘಾತ ಎನ್ನುತ್ತಾರೆ ಸ್ಥಳೀಯರು ಈ ಅಪಘಾತ ಶ್ರೀನಿವಾಸಪುರ ತಾಲ್ಲೂಕಿನ ಆಂಧ್ರ-ಕರ್ನಾಟಕದ ಗಡಿಯಂಚಿನಲ್ಲಿ ಹಕ್ಕಿ ಪಿಕ್ಕಿ ಕಾಲೋನಿ ಗೇಟ್ ಬಳಿ ನಡೆದಿದ್ದು,ಮೃತ ವ್ಯಕ್ತಿಯ ದೇಹದ ಭಾಗಗಳು ರಸ್ತೆಯಲ್ಲಾ ಚಲ್ಲಾಪಿಲ್ಲಿಯಾಗಿ ಬಿದಿರುವುದಾಗಿ ಮೃತನನ್ನು ಗಡಿಯಾಚಗಿನ ಆಂಧ್ರದ ಬಾರ್ಲಪಲ್ಲಿ ಗ್ರಾಮದ ವಸಂತ ಕುಮಾರ್ (30) ಎಂದು ಗುರುತಿಸಲಾಗಿದೆ ಎರಡು ಪ್ರತ್ಯಕ ಅಪಘಾತಗಳ ಪ್ರಕರಣಗಳು ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮಾರ್ಗದಲ್ಲಿ ಹೆಚ್ಚಿದ ಆಂಧ್ರ ಖಾಸಗಿ ಬಸ್ಸುಗಳ ಒಡಾಟ
ಬೆಂಗಳೂರು-ಮದನಪಲ್ಲಿ ಹೆದ್ದಾರಿ ಮಾರ್ಗವಾಗಿ ಆಂಧ್ರದ ರಾಜಧಾನಿ ಅಮರಾವತಿಗೆ(ವಿಜಯವಾಡ) ತೆರಳಲು ಈ ಮಾರ್ಗ ಹತ್ತಿರದ ದಾರಿಯಾಗಿದ್ದು ಇದರಿಂದಾಗಿ ಇತ್ತಿಚಿಗೆ ಆಂಧ್ರ ಮೂಲದ ಖಾಸಗಿ ಬಸ್ಸುಗಳ ಒಡಾಟ ಹೆಚ್ಚಾಗಿದ್ದು ಈ ಬಸ್ಸುಗಳಿಗೆ ಸರಿಯಾದ ದಾಖಲೆಗಳು ಇದಿಯಾ ಇಲ್ಲವಾ ಎಂಬ ಅನುಮಾನವನ್ನು ಸಾರ್ವಜನಿಕರು ವ್ಯಕ್ತಿಪಡಿಸುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Friday, June 13