ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿದ ಸ್ಲೀಪರ್ ಕೋಚ್ ಖಾಸಗಿ ಬಸ್ ಪಕ್ಕದ ಹಳ್ಳಕ್ಕೆ ಉರಳಿ ಬಿದ್ದು ಒಬ್ಬರು ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಂಧ್ರದ ಪ್ರಕಾಶಂ ಜಿಲ್ಲೆಯ ಪುನಗೋಡು ಗ್ರಾಮದ ಅನಿಲ್ (22) ಎಂದು ಗುರತಿಸಲಾಗಿದೆ. ಖಾಸಗಿ ಬಸ್ ಶ್ರೀ ಶ್ರೀನಿವಾಸ ಬಸ್ ಟ್ರಾವಲ್ಸ್ ಬೆಂಗಳೂರಿನಿಂದ ಆಂಧ್ರದ ಒಂಗೋಲ್ ನಗರಕ್ಕೆ ಮದನಪಲ್ಲಿ ಮಾರ್ಗವಾಗಿ ಹೋಗಲು ರಾಯಲ್ಪಾಡು ಬಳಿ ಚಲಿಸುತ್ತಿದ್ದಾಗ ಭಾನುವಾರ ಮದ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಾಯಲ್ಪಾಡು ತಿರುವಿನಲ್ಲಿ ಹಳ್ಳಕ್ಕೆ ಉರಳಿ ಬಿದ್ದಿದೆ ಬಸ್ಸಿನಲ್ಲಿದ್ದ ಸುಮಾರು 17 ಮಂದಿ ಪ್ರಯಾಣಿಕರಲ್ಲಿ ಮೃತ ಯುವಕನ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೆ ಮೃತ ಪಟ್ಟಿರುವುದಾಗಿ ಹೇಳಲಾಗಿದೆ.
ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ದೇಹ ಚಿದ್ರಚಿದ್ರ
ಬೆಂಗಳೂರು-ಮದನಪಲ್ಲಿ ಹೆದ್ದಾರಿಯಲ್ಲಿ ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಗುದ್ದಿಕೊಂಡು ಹೋಗಿದೆ ವಾಹನ ಡಿಕ್ಕಿಯಾದ ರಭಸಕ್ಕೆ ವ್ಯಕ್ತಿ ದೇಹ ಚಿದ್ರಚಿದ್ರವಾಗಿದ್ದು ಇದೊಂದು ಭಿಕರ ಅಂಪಘಾತ ಎನ್ನುತ್ತಾರೆ ಸ್ಥಳೀಯರು ಈ ಅಪಘಾತ ಶ್ರೀನಿವಾಸಪುರ ತಾಲ್ಲೂಕಿನ ಆಂಧ್ರ-ಕರ್ನಾಟಕದ ಗಡಿಯಂಚಿನಲ್ಲಿ ಹಕ್ಕಿ ಪಿಕ್ಕಿ ಕಾಲೋನಿ ಗೇಟ್ ಬಳಿ ನಡೆದಿದ್ದು,ಮೃತ ವ್ಯಕ್ತಿಯ ದೇಹದ ಭಾಗಗಳು ರಸ್ತೆಯಲ್ಲಾ ಚಲ್ಲಾಪಿಲ್ಲಿಯಾಗಿ ಬಿದಿರುವುದಾಗಿ ಮೃತನನ್ನು ಗಡಿಯಾಚಗಿನ ಆಂಧ್ರದ ಬಾರ್ಲಪಲ್ಲಿ ಗ್ರಾಮದ ವಸಂತ ಕುಮಾರ್ (30) ಎಂದು ಗುರುತಿಸಲಾಗಿದೆ ಎರಡು ಪ್ರತ್ಯಕ ಅಪಘಾತಗಳ ಪ್ರಕರಣಗಳು ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮಾರ್ಗದಲ್ಲಿ ಹೆಚ್ಚಿದ ಆಂಧ್ರ ಖಾಸಗಿ ಬಸ್ಸುಗಳ ಒಡಾಟ
ಬೆಂಗಳೂರು-ಮದನಪಲ್ಲಿ ಹೆದ್ದಾರಿ ಮಾರ್ಗವಾಗಿ ಆಂಧ್ರದ ರಾಜಧಾನಿ ಅಮರಾವತಿಗೆ(ವಿಜಯವಾಡ) ತೆರಳಲು ಈ ಮಾರ್ಗ ಹತ್ತಿರದ ದಾರಿಯಾಗಿದ್ದು ಇದರಿಂದಾಗಿ ಇತ್ತಿಚಿಗೆ ಆಂಧ್ರ ಮೂಲದ ಖಾಸಗಿ ಬಸ್ಸುಗಳ ಒಡಾಟ ಹೆಚ್ಚಾಗಿದ್ದು ಈ ಬಸ್ಸುಗಳಿಗೆ ಸರಿಯಾದ ದಾಖಲೆಗಳು ಇದಿಯಾ ಇಲ್ಲವಾ ಎಂಬ ಅನುಮಾನವನ್ನು ಸಾರ್ವಜನಿಕರು ವ್ಯಕ್ತಿಪಡಿಸುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



