ಚಿಂತಾಮಣಿ:ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವವಾಗಿ ಸುಟ್ಟು ಕರಕಲರಾಗಿದ್ದು ಇತರೆ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಲ್ಲಿ ಹಾಗು ಜೋಗ್ಯಾನಹಳ್ಳಿ ಗೆಟ್ ನಡುವೆ ಭಾನುವಾರ ನಡು ಮಧ್ಯಾನಃ ನಡೆದಿದೆ.
ಕಡಪಾದಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದ ಕುಟುಂಬ.
ಬೆಂಗಳೂರಿನಿಂದ ತಿರುಪತಿಗೆ ಹೋಗುವ ಖಾಸಗಿ ಬಸ್ ಭಾರತಿ ಸರ್ವಿಸ್ ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಎದುರಿಗೆ ಅತಿ ವೇಗವಾಗಿ ಬರುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಹಳ್ಳಕ್ಕೆ ಉರಳಿ ಬಿದ್ದಿದೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡಿದೆ ಇದರಿಂದಾಗಿ ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಜೀವವಾಗಿ ಸುಟ್ಟುಹೋಗಿದ್ದಾರೆ.
ಅಪಘಾತದಲ್ಲಿ ಸಜೀವವಾಗಿ ಸುಟ್ಟು ಮೃತಪಟ್ಟವರನ್ನು ಆಂಧ್ರದ ಕಡಪ ಮೂಲದ ಧನಂಜಯರೆಡ್ಡಿ(45)ಅವರ ತಾಯಿ ಕಳಾವತಿ(62)ಎಂದು ಗುರುತಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿರುವ ಶೋಭಾ(29 ವರ್ಷ)ಮಹಾಲಕ್ಷ್ಮಿ(60)ಮನ್ವಿತ್ (3ವರ್ಷ) ಸೇರಿದಂತೆ ಮೃತಪಟ್ಟ ಇಬ್ಬರು ಒಟ್ಟು ಐವರು ವ್ಯಕ್ತಿಗಳು ಒಂದೇ ಕುಟುಂಬದವರಾಗಿದ್ದು ಇವರೆಲ್ಲರೂ ಬೆಂಗಳೂರಿನಲ್ಲಿ ವಾಸವಿದ್ದು ಊರಿಗೆ ಬಂದಿದ್ದು ವಾಪಸ್ಸು ಬೆಂಗಳೂರಿಗೆ ಹೋಗುವಾಗ ಅಪಘಾತ ಆಗಿದೆ.
ಘಟನೆ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ರಕ್ಷಣಾಧಿಕಾರಿ ಕುಶಾಲ್ ಚೌಕ್ಸೆ,ಅಡಿಷನಲ್ ಎಸ್ಪಿ ರಜಾ ಇಮಾಮ್ ಖಾಸಿಂ,ಚಿಂತಾಮಣಿ ಡಿವೈಎಸ್ಪಿ ಮುರಳಿಧರ್,ಸರ್ಕಲ್ ಇನ್ಸ್ಪೆಕ್ಟರ್ ವೆಂಕಟರವಣಪ್ಪ,ಸಬ್ ಇನ್ಸ್ಪೆಕ್ಟರ್ ಶಿವರಾಜ್, ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



