ಶ್ರೀನಿವಾಸಪುರ:ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಸವಾರರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುತ್ತದೆ.
ತಾಲೂಕಿನ ಕಡಪ- ಬೆಂಗಳೂರು ಹೆದ್ದಾರಿಯಲ್ಲಿ ತಾಡಿಗೋಳ್ ನಂತರದ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುವ ಅಪಘಾತ ನಡೆದಿದ್ದು ಮೃತ ದುರ್ದೈವಿಗಳನ್ನು ತಾ.ಬೈರಗಾನಪಲ್ಲಿ ಗ್ರಾಮದ ಗೋಪಾಲಪ್ಪ(58) ಹಾಗು ಚಿಂತಾಮಣಿ ತಾ.ಕೊನಪ್ಪಲ್ಲಿ ನಿವಾಸಿ ವೆಂಕಟೇಶ್ (45) ಎಂದು ಗುರುತಿಸಲಾಗಿದೆ.ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿರುತ್ತದೆ.
ಬೆಂಗಳೂರು ನೊಂದಣಿ ಹೊಂದಿರುವ ಮಾರುತಿ ಎಸ್ ಕ್ರಾಸ್ ಹೈಬ್ರಿಡ್ ನಿಲಿ ಬಣ್ಣದ ಕಾರು ಚಿಂತಾಮಣಿ ಕಡೆಗೆ ವೇಗವಾಗಿ ಹೋಗುತಿದ್ದು ಚಾಲಕನ ನಿಯಂತ್ರಣ ತಪ್ಪಿ ಚಿಂತಾಮಣಿಯಲ್ಲಿ ಸಂತೆ ಮುಗಿಸಿ ಬೈರಗಾನಪಲ್ಲಿಗೆ ಹೋರಟಿದ್ದ ಇಬ್ಬರಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಅಪಘಾತ ನಡೆದಿದೆ ಎನ್ನುಲಾಗಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಮತ್ತು ಸವಾರರ ಸಮೇತ ದ್ವಿಚಕ್ರ ವಾಹನ ಸುಮಾರು 15 ಅಡಿಗಳ ಆಳದ ಕಂದಕಕ್ಕೆ ಬಿದ್ದಿದ್ದು ಹಳ್ಳದಲ್ಲಿದ್ದ ಕಲ್ಲು ಬಂಡೆಗಳಿಗೆ ಬಡಿದು ದ್ವಿಚಕ್ರ ಸವಾರರು ಸ್ಥಳದ್ಲ್ಲೆ ಮೃತಪಟ್ಟಿರುತ್ತಾರೆ.
ರಸ್ತೆ ಮಾರ್ಗ ಸೂಚಿ ಇಲ್ಲದ್ದೆ ಅಪಘಾತಕ್ಕೆ ಕಾರಣ!
ಚಿಂತಾಮಣಿಯ ಮಾಡಿಕೆರೆ ಕ್ರಾಸ್ ನಿಂದ ಆಂಧ್ರದ ಗಡಿಯಂಚಿನ ವರಿಗೂ ಕರ್ನಾಟಕ ಸರ್ಕಾರದ ಕೆ ಶಿಪ್ ರಸ್ತೆ ನಿರ್ಮಾಣವಾಗುತ್ತಿದೆ ರಸ್ತೆ ನಿರ್ಮಾಣದ ಗುತ್ತಿಗೆದಾರ ಸಂಸ್ಥೆ ಅಪಘಾತ ಆಗಿರುವ ಜಾಗದಲ್ಲಿ ತಿರುವು ಇರುವ ಬಗ್ಗೆ ಹಾಗು ಕಂದಕ ಇರುವ ಬಗ್ಗೆ ಮಾರ್ಗ ಸೂಚಿ ಅಳವಡಿಸದೆ ಇರುವುದರಿಂದ ಅಪಘಾತ ನಡೆದಿದೆ ಎನ್ನುತ್ತಾರೆ ಸ್ಥಳಿಯರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



