ಶ್ರೀನಿವಾಸಪುರ:ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಸವಾರರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುತ್ತದೆ.
ತಾಲೂಕಿನ ಕಡಪ- ಬೆಂಗಳೂರು ಹೆದ್ದಾರಿಯಲ್ಲಿ ತಾಡಿಗೋಳ್ ನಂತರದ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುವ ಅಪಘಾತ ನಡೆದಿದ್ದು ಮೃತ ದುರ್ದೈವಿಗಳನ್ನು ತಾ.ಬೈರಗಾನಪಲ್ಲಿ ಗ್ರಾಮದ ಗೋಪಾಲಪ್ಪ(58) ಹಾಗು ಚಿಂತಾಮಣಿ ತಾ.ಕೊನಪ್ಪಲ್ಲಿ ನಿವಾಸಿ ವೆಂಕಟೇಶ್ (45) ಎಂದು ಗುರುತಿಸಲಾಗಿದೆ.ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿರುತ್ತದೆ.
ಬೆಂಗಳೂರು ನೊಂದಣಿ ಹೊಂದಿರುವ ಮಾರುತಿ ಎಸ್ ಕ್ರಾಸ್ ಹೈಬ್ರಿಡ್ ನಿಲಿ ಬಣ್ಣದ ಕಾರು ಚಿಂತಾಮಣಿ ಕಡೆಗೆ ವೇಗವಾಗಿ ಹೋಗುತಿದ್ದು ಚಾಲಕನ ನಿಯಂತ್ರಣ ತಪ್ಪಿ ಚಿಂತಾಮಣಿಯಲ್ಲಿ ಸಂತೆ ಮುಗಿಸಿ ಬೈರಗಾನಪಲ್ಲಿಗೆ ಹೋರಟಿದ್ದ ಇಬ್ಬರಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಅಪಘಾತ ನಡೆದಿದೆ ಎನ್ನುಲಾಗಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಮತ್ತು ಸವಾರರ ಸಮೇತ ದ್ವಿಚಕ್ರ ವಾಹನ ಸುಮಾರು 15 ಅಡಿಗಳ ಆಳದ ಕಂದಕಕ್ಕೆ ಬಿದ್ದಿದ್ದು ಹಳ್ಳದಲ್ಲಿದ್ದ ಕಲ್ಲು ಬಂಡೆಗಳಿಗೆ ಬಡಿದು ದ್ವಿಚಕ್ರ ಸವಾರರು ಸ್ಥಳದ್ಲ್ಲೆ ಮೃತಪಟ್ಟಿರುತ್ತಾರೆ.
ರಸ್ತೆ ಮಾರ್ಗ ಸೂಚಿ ಇಲ್ಲದ್ದೆ ಅಪಘಾತಕ್ಕೆ ಕಾರಣ!
ಚಿಂತಾಮಣಿಯ ಮಾಡಿಕೆರೆ ಕ್ರಾಸ್ ನಿಂದ ಆಂಧ್ರದ ಗಡಿಯಂಚಿನ ವರಿಗೂ ಕರ್ನಾಟಕ ಸರ್ಕಾರದ ಕೆ ಶಿಪ್ ರಸ್ತೆ ನಿರ್ಮಾಣವಾಗುತ್ತಿದೆ ರಸ್ತೆ ನಿರ್ಮಾಣದ ಗುತ್ತಿಗೆದಾರ ಸಂಸ್ಥೆ ಅಪಘಾತ ಆಗಿರುವ ಜಾಗದಲ್ಲಿ ತಿರುವು ಇರುವ ಬಗ್ಗೆ ಹಾಗು ಕಂದಕ ಇರುವ ಬಗ್ಗೆ ಮಾರ್ಗ ಸೂಚಿ ಅಳವಡಿಸದೆ ಇರುವುದರಿಂದ ಅಪಘಾತ ನಡೆದಿದೆ ಎನ್ನುತ್ತಾರೆ ಸ್ಥಳಿಯರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16