ಶ್ರೀನಿವಾಸಪುರ:ತಾಲೂಕಿನ ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ರಾಯಲ್ಪಾಡು ಗ್ರಾಮದ ಊರಾಚಗಿನ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಸುಮಾರು 4-5 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಯಲ್ಪಾಡು ಗ್ರಾಮದ ಹೊರವಲಯದ ಬಾವಿಯಲ್ಲಿ ಶವ ತೆಲುತ್ತಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಯಲ್ಪಾಡು ಪೊಲೀಸರು ಮೃತ ದೇಹ ಹೊರತಗೆಸಿದ್ದು ಅಂದಾಜು 40 ವರ್ಷದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ,ನೀಲಿ ಬಣ್ಣದ ಶರ್ಟ್ ಹಾಗೂ ಬೆಲ್ಟ್ ಚಪ್ಪಲಿಗಳು ಬಾವಿಯ ದಡದಲ್ಲಿಯೆ ಇದ್ದು ಇದು ಆತ್ಮಹತ್ಯೆ ಇರಬಹುದ ಎನ್ನಲಾಗಿದೆ,ಶವದ ಗುರುತು ಪಡೆಯಲು ಯಾವುದೆ ಪುರಾವೆ ಇಲ್ಲ ಎನ್ನುತ್ತಾರೆ ಪೋಲಿಸರು ಶವವನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು,ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೆ ವ್ಯಕ್ತಿ ನಾಪತ್ತೆ ಪ್ರಕರಣ ಇಲ್ಲವಾಗಿದ್ದು ಇತರೆ ತಾಲೂಕು ಅಥಾವ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವ್ಯಕ್ತಿ ನಾಪತ್ತೆ ಸಂಭಂದಿತ ಪ್ರಕರಣ ಇದ್ದರೆ ಮಾಹಿತಿ ಪಡೆಯಬಹುದಾಗಿದೆ ಎನ್ನುತ್ತಾರೆ ಪ್ರಕರಣ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



