ಚಿಂತಾಮಣಿ: ತಾಲ್ಲೂಕಿನ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಪಲ್ಲಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಅಂಜನಿಸುತ ಫೌಂಡೇಶನ್ ಅಧ್ಯಕ್ಷ ಪ್ರದೀಪ್ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮಗಳ ಭಾಗವಾಗಿ ಇಲ್ಲಿನ ಶ್ರೀ ಅಭಯ ಆಂಜನೇಯ ಸ್ವಾಮಿ ಮೂರ್ತಿಗೆ ತುಳುನಾಡು ದಕ್ಷಿಣ ಕನ್ನಡದ ಕರಾವಳಿಯ ಪಂಜುರ್ಲಿ ದೈವದ ಅಲಂಕಾರವನ್ನು ಮಾಡಲಾಗಿತ್ತು.
ಪ್ರತಿವರ್ಷವೂ ಹನುಮ ಜಯಂತಿ ಮಾರನೇ ದಿನ ಅಭಯಾಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ನಡೆಯುವುದು ವಿಶೇಷ.
ದೇವರ ಮೂರ್ತಿಗೆ ಅಭಿಷೇಕ ಮಾಡಿದ ನಂತರ ವಿಶೇಷವಾಗಿ ಪಂಜುರ್ಲಿ ಅಲಂಕಾರ ಮಾಡಲಾಗಿದ್ದು, ದೇವಾಲಯದಲ್ಲಿ ಪೂಜೆ ಹೋಮ ಹವನ ನೆರವೇರಿಸಲಾಯಿತು.ಬೆಳಿಗ್ಗೆಯಿಂದ ಸಂಜೆವರೆಗೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಹನುಮ ಭಕ್ತರು ಆಂಜನೇಯ ದೇವಸ್ಥಾನಗಳಿಗೆ ಶಕ್ತಿ ಸ್ವರೂಪನಾದ ಹನುಮ ದೇವರ ಮೂರ್ತಿಯ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿದರು.
ಕಾಂತರ ಸಿನಿಮಾ ಪ್ರಭಾವ ಪಂಜುರ್ಲಿ
ಕಾಂತಾರ ಸಿನಿಮಾ ಬಿಡುಗಡೆಯಾದ ನಂತರ ಸಿನಿಮಾದ ಪ್ರಭಾವದಿಂದಾಗಿ ಪಂಜುರ್ಲಿ ದೈವದ ಬಗ್ಗೆ ದಕ್ಷಿಣ ಭಾಗದ ಕರ್ನಾಟಕದ ಜನರಲ್ಲೂ ಪಂಜುರ್ಲಿ ದೈವದ ಭಕ್ತಿ ಹೆಚ್ಚಾಗಿದ್ದು, ದೈವಗಳ ಆರಾಧನೆ, ನಾಗರಾಧಾನೆ ಮತ್ತು ಭೂತಕೋಲ ಸೇರಿದಂತೆ ಕರಾವಳಿಯ ಸಂಸ್ಕೃತಿಯನ್ನು ತಿಳಿದುಕೊಳ್ಳುವ ಕುತೂಹಲ ಹೆಚ್ಚಾಗುತ್ತಿದೆ. ಈ ಬಗ್ಗೆ ಜನ ಕರಾವಳಿ ಸಂಸ್ಕಾರ ಸಂಸ್ಕೃತಿಯನ್ನು ಅಭಿಮಾನಿಸುವರ ಸಂಖ್ಯೆ ಹೆಚ್ಚುತ್ತಿದೆ.ಕಾಂತಾರ ಸಿನಿಮಾ ಪ್ರದರ್ಶನಗಳ ವೇಳೆ ಜನ ಪಂಜುರ್ಲಿ ವೇಷಭೂಷಣ ತೊಟ್ಟು ಕುಣಿಯುತ್ತ ಅಭಿಮಾನ ಮೆರೆದಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



