ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



