ನ್ಯೂಜ್ ಡೆಸ್ಕ್:ಪಾಕಿಸ್ತಾನ ಭಾರತದ ನಾಗರೀಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವ ಕಾರಣ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ. ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಿಂದ ಗ್ರಾಮಸ್ಥರನ್ನು ತಕ್ಷಣವೇ ಬೇರೆಡೆಗೆ ಸ್ಥಳಾಂತರಕ್ಕೆ ಹೇಳಲಾಗಿದೆ ಇಂದು ರಾತ್ರಿ ಪಾಕಿಸ್ತಾನಕ್ಕೆ ಮತ್ತೊಂದು ಶಾಸ್ತಿ ಮಾಡಲು ಎಲ್ಲಾ ಸಿದ್ಧತೆ ಮಾಡಲಾಗಿದೆ. ಇದರಿಂದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದು ಸತತವಾಗಿ ನಡೆಸಿದಂತ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಪಾಕಿಸ್ತಾನದ 2 ಫೈಟರ್ ಜೆಟನ್ನು ಭಾರತ ಹೊಡೆದುರುಳಿಸಿದ್ದು ಈ ಪೈಕಿ ಪಾಕಿಸ್ತಾನದ ಪೈಲೆಟನ್ನು ಜೀವಂತವಾಗಿ ಸೆರೆ ಹಿಡಿದುಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ
ಭಾರತೀಯ ವಾಯುಪಡೆ ಮತ್ತು ಭಾರತೀಯ ಸೇನೆ ತೀವ್ರ ಪ್ರತೀಕಾರಕ್ಕಾಗಿ , ಭಾರತೀಯ ನೌಕಾ ಪಡೆಯನ್ನು ಈಗ ಐಎನ್ಎಸ್ ವಿಕ್ರಾಂತ್ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ. ಅರೇಬಿಯನ್ ಸಮುದ್ರದಲ್ಲಿ ನೆಲೆಗೊಂಡಿರುವ ಐಎನ್ಎಸ್ ವಿಕ್ರಾಂತ್ ಕರಾಚಿಯನ್ನು ಗುರಿಯಾಗಿಸಿಕೊಂಡು ಭಾರಿ ವಿನಾಶವನ್ನು ಉಂಟುಮಾಡಲು ಪ್ರಾರಂಭಿಸಿದೆ. ನೌಕಾ ದಾಳಿಯು ಕರಾಚಿ ಬಂದರು ಸೇರಿದಂತೆ ಕರಾಚಿ ನಗರದ ದೊಡ್ಡ ಬೆಂಕಿಗೆ ಕಾರಣವಾಗಿದೆ ಎಂದು ರಾಷ್ಟ್ರೀಯ ಟಿವಿ ವರದಿ ತಿಳಿಸಿದೆ.ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆಯ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಕ್ಷಿಪಣಿಗಳು ಪಾಕಿಸ್ತಾನದ ಲಾಹೋರ್ ನುಗ್ಗಿದೆ ಲಾಹೋರ್ ಸೇರಿ ಪಾಕಿಸ್ತಾನದ ವಿವಿಧ ನಗರಗಳನ್ನು ಟಾರ್ಗೆಟ್ ಮಾಡಿ ಭಾರತೀಯ ಸೇನಾ ವಿಮಾನಗಳು ನುಗ್ಗಿದೆ.ಪಾಕಿಸ್ತಾನ ರಾಜಧಾನಿ ಇಸ್ಲಾಂಬಾದ್ ಸೇರಿದಂತೆ ಸುಮಾರು 16 ನಗರಗಳ ಮೇಲೆ ದಾಳಿ ಇದರಿಂದ ಪಾಕಿಸ್ತಾನ ಪತರಗುಟ್ಟಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



