ಶ್ರೀನಿವಾಸಪುರ:ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೊಬ್ಬಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕು ಕಸಬಾ ಹೋಬಳಿ ಪಾಳ್ಯ ಗ್ರಾಮದಲ್ಲಿ ನಡದಿದೆ.
ಕೊಲೆಯಾದ ಮಹಿಳೆಯನ್ನು ಗ್ರಾಮದ ಶ್ರೀರಾಮರೆಡ್ಡಿ ಎಂಬುವರ ಪತ್ನಿ ರೂಪಾ (38) ಎಂದು ಗುರುತಿಸಲಾಗಿದೆ.ಸೋಮವಾರ ಮಧ್ಯಾಹ್ನ ರೂಪಾ ಹಸು ಮೇಯಿಸಲು ಹೋದವರು ಮುಸ್ಸಂಜೆಯಾದರು ಮನೆಗೆ ವಾಪಸ್ಸು ಬಾರದ ಹಿನ್ನಲೆ ಕುಟುಂಬಸ್ಥರು ಗ್ರಾಮದ ಸುತ್ತಮುತ್ತಲು ಹುಡುಕಾಡಿದಾಗ ಗ್ರಾಮದ ಹೊರವಲಯದ ಚುರುವುನಹಳ್ಳಿಗೆ ಹೋಗುವ ದಾರಿಯಲ್ಲಿನ ಕೆರೆ ಕಾಲುವೆ ಬಳಿ ರೂಪಾ ರಕ್ತದ ಮಡವಿನಲ್ಲಿ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ ಕುಟುಂಬದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಶ್ರೀನಿವಾಸಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಇತ್ತು ಪರಿಶೀಲನೆ ನಡೆಸಿದ್ದಾರೆ, ಮೊಬೈಲ್ ಕಾಲ್ ತನಿಖೆ ಒಳಪಡಿಸಿದಾಗ ಕೊಲೆ ಆರೋಪಿ ಸುಳಿವು ಸಿಕ್ಕಿದೆ ಗ್ರಾಮದ ಆನಂದಪ್ಪ ಎಂಬುದನ್ನು ಪತ್ತೆ ಹಚ್ಚಿದ್ದಾರೆ ಪೋಲಿಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಮೃತ ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಇದ್ದ ವಿಚಾರ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆ ಹಾಗು ಆರೋಪಿ ನಡುವೆ ಇತ್ತಿಚಿಗೆ ಹಣಕಾಸು ವಿಷಯವಾಗಿ ವೈಮನಸ್ಯ ಏರ್ಪಟ್ಟ ಹಿನ್ನಲೆಯಲ್ಲಿ ಮಹಿಳೆಯನ್ನು ಕತ್ತು ಕೊಯ್ದು ಹತ್ಯೆ ಮಾಡರಬಹುದು ಎಂದು ಶಂಕಿಸಲಾಗಿದೆ.ಆರೋಪಿ ಕೊಲೆ ಮಾಡಲು ಬಳಸಿದ್ದ ಎನ್ನಲಾದ ಕುಡುಗೊಲನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್,ಇನ್ಸಪೇಕ್ಟರ್ ಗೊರವನಕೊಳ್ಳ ಸೇರಿದಂತೆ ಪೋಲಿಸ್ ಸಿಬ್ಬಂದಿ ಭೇಟಿಕೊಟ್ಟಿದ್ದರು. ಇಂದು ಮಂಗಳವಾರ ಬೆಳಿಗ್ಗೆ ಪೋಲಿಸರು ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆ ತಂದು ಮಹಜರು ನಡೆಸಿದ್ದಾರೆ
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



