ಬೆಂಗಳೂರು:ಕಲರ್ಸ್ ಕನ್ನಡ ವಾಹಿನಿಯಲ್ಲಿ ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸಿಸನ್ 11 ಶೊನಲ್ಲಿ ಸ್ವರ್ಗ-ನರಕದ ಪರಿಕಲ್ಪನೆ ಇದೆ ಇಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳನ್ನು ಜೈಲಿನ ರೂಪದಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿರುವಂತೆ ನೂರಾರು ಕ್ಯಾಮರಾಗಳಲ್ಲಿ ಚಿತ್ರಿಸಲಾಗುತ್ತಿದೆ ಇಲ್ಲಿ ನರಕದಲ್ಲಿರುವ ಸ್ಪರ್ಧಿಗಳಿಗೆ ಗಂಜಿಯನ್ನು ಮಾತ್ರ ಆಹಾರವಾಗಿ ನೀಡಲಾಗುತ್ತಿತ್ತು ಇದು ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ,
ಸ್ವರ್ಗದ ಸ್ಪರ್ಧಿಗಳು ಬಾತ್ರೂಮ್ಗೆ ಹೋಗಲು ಅನುಮತಿ ತೆಗೆದುಕೊಳ್ಳಬೇಕಾದ ಬಗ್ಗೆ ಶೋನಲ್ಲಿ ತೊರಿಸಲಾಗಿದ್ದು ಇದು ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸದಂತಾಗುತ್ತದೆ ಇದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ದೈಹಿಕ ಭಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಪಡೆದುಕೊಳ್ಳುವುದು ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ, ಮತ್ತು ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರಾಮನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಿಗ್ ಬಾಸ್ ಶೋ ಚಿತ್ರಕರಣವಾಗುತ್ತಿರುವ ಜಾಗಕ್ಕೆ ತೆರಳಿ ಸಂಘಟಕರಿಗೆ ನೋಟಿಸ್ ನೀಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



