ಬೆಂಗಳೂರು:ಕಲರ್ಸ್ ಕನ್ನಡ ವಾಹಿನಿಯಲ್ಲಿ ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸಿಸನ್ 11 ಶೊನಲ್ಲಿ ಸ್ವರ್ಗ-ನರಕದ ಪರಿಕಲ್ಪನೆ ಇದೆ ಇಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳನ್ನು ಜೈಲಿನ ರೂಪದಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿರುವಂತೆ ನೂರಾರು ಕ್ಯಾಮರಾಗಳಲ್ಲಿ ಚಿತ್ರಿಸಲಾಗುತ್ತಿದೆ ಇಲ್ಲಿ ನರಕದಲ್ಲಿರುವ ಸ್ಪರ್ಧಿಗಳಿಗೆ ಗಂಜಿಯನ್ನು ಮಾತ್ರ ಆಹಾರವಾಗಿ ನೀಡಲಾಗುತ್ತಿತ್ತು ಇದು ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ,
ಸ್ವರ್ಗದ ಸ್ಪರ್ಧಿಗಳು ಬಾತ್ರೂಮ್ಗೆ ಹೋಗಲು ಅನುಮತಿ ತೆಗೆದುಕೊಳ್ಳಬೇಕಾದ ಬಗ್ಗೆ ಶೋನಲ್ಲಿ ತೊರಿಸಲಾಗಿದ್ದು ಇದು ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸದಂತಾಗುತ್ತದೆ ಇದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ದೈಹಿಕ ಭಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಪಡೆದುಕೊಳ್ಳುವುದು ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ, ಮತ್ತು ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರಾಮನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಿಗ್ ಬಾಸ್ ಶೋ ಚಿತ್ರಕರಣವಾಗುತ್ತಿರುವ ಜಾಗಕ್ಕೆ ತೆರಳಿ ಸಂಘಟಕರಿಗೆ ನೋಟಿಸ್ ನೀಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



