ಶ್ರೀನಿವಾಸಪುರ:ಸ್ತ್ರೀಯರ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಸಾಧನೆಗಳನ್ನು ಹಾಗು ಸಮಾಜಕ್ಕೆ ಅವರು ನೀಡಿರುವ ಇತರೆ ಸಾಧಕ ಕೊಡುಗೆಗಳನ್ನು ಸಂಭ್ರಮಿಸುವ ದಿನವೆ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾದ ಮಂಜುಳಾ ಭೀಮರಾವ್ ಹೇಳಿದರು ಅವರು ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಹೆಣ್ಣುಮಕ್ಕಳಲ್ಲಿ ಅಗಾಧವಾದ ಶಕ್ತಿ ಸಾಧಿಸಬೇಕು ಎಂಬ ಚಲ ಇದೆ ಹಾಗೆ ಮಾತೃವಾತ್ಸಲ್ಯ ಸಮರ್ಪಣಾ ಮನೋಭಾವ ಇರುವ ಮಹಿಳೆ ಬಹುಮುಖಿಯಾಗಿ ಸಾಧಿಸಲು ನಿಂತರೆ ಯಾವುದೆ ತಾರತಮ್ಯ ಅಡ್ಡಿಯಾಗದು ಎಂದರು.
ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯೆ ಗೌಸಿಯಾಭಾನು ಮಾತನಾಡಿ ವಿದ್ಯಾರ್ಥಿನಿಯರು ವಿದ್ಯಾರ್ಥಿ ದೆಸೆಯಲ್ಲಿ ವೈಙ್ಞಾನಿಕವಾಗಿ ಸಮಾಜದ ವ್ಯವಸ್ಥೆಯ ಬಗ್ಗೆ ಅರಿಬೇಕಿದೆ ದಿನವು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರನ್ನು ಅಸಮಾನ್ಯ ಸಾಧನೆ ಮಾಡುತ್ತಿದ್ದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಲು ಶ್ರಮಿಸುತ್ತಿದ್ದಾಳೆ ಎಂದರು.ಮಹಿಳಾ ಸಾಧಕಿಯರ ಆದರ್ಶವನ್ನು ತಗೆದುಕೊಂಡು ವಿದ್ಯಾರ್ಥಿನಿಯರು ಸಮಾಜ ಹೆಮ್ಮೆ ಪಡುವಂತೆ ಸಾಧನೆ ಮಾಡುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಶಾಲ ಮುಖ್ಯಶಿಕ್ಷಕ ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು ಶಾಲ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆನಂದ್ ರೆಡ್ಡಿ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಮಂಜುಳಾ ಸಾಹಿತಿಗಳಾದ ಶಂಕರೇಗೌಡ ಪನಸಮಾಕಲಳ್ಳಿ ಚೌಡರೆಡ್ಡಿ .ಶಶಿಕಲಾ ವಿಜಯಮ್ಮ ಗೌರಮ್ಮ ಶ್ರೀದೇವಿ ಅಶ್ವಿನಿ ಗೀತಾಂಜಲಿ ರೆಡ್ಡಮ್ಮ ಮಹೇಶ್ ಪ್ರಸನ್ ನಾಗರಾಜ್ ನಾರಾಯಣಸ್ವಾಮಿ ರಾಮಚಂದ್ರಪ್ಪ ಚೇತನ್,ಸಿಆರ್ಪಿ ರಾಧಾಕೃಷ್ಣ ಮುಂತಾದವರು ಇದ್ದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾಗಿರುವ ಮಂಜುಳಾ ಭೀಮರಾವ್ ಪರಿಸರ ಸಂರಕ್ಷಣೆ ಸೇರಿದಂತೆ ವಿಜ್ಞಾನ ವಿಚಾರವಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುಳಾ ಭೀಮರಾವ್ ಮತ್ತು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗೌಸಿಯ ಬಾನು ರವರನ್ನು ಶಾಲೆಯ ವಿದ್ಯಾರ್ಥಿಗಳು ಸನ್ಮಾನಿಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28