ಶ್ರೀನಿವಾಸಪುರ:ಸ್ತ್ರೀಯರ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಸಾಧನೆಗಳನ್ನು ಹಾಗು ಸಮಾಜಕ್ಕೆ ಅವರು ನೀಡಿರುವ ಇತರೆ ಸಾಧಕ ಕೊಡುಗೆಗಳನ್ನು ಸಂಭ್ರಮಿಸುವ ದಿನವೆ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾದ ಮಂಜುಳಾ ಭೀಮರಾವ್ ಹೇಳಿದರು ಅವರು ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಹೆಣ್ಣುಮಕ್ಕಳಲ್ಲಿ ಅಗಾಧವಾದ ಶಕ್ತಿ ಸಾಧಿಸಬೇಕು ಎಂಬ ಚಲ ಇದೆ ಹಾಗೆ ಮಾತೃವಾತ್ಸಲ್ಯ ಸಮರ್ಪಣಾ ಮನೋಭಾವ ಇರುವ ಮಹಿಳೆ ಬಹುಮುಖಿಯಾಗಿ ಸಾಧಿಸಲು ನಿಂತರೆ ಯಾವುದೆ ತಾರತಮ್ಯ ಅಡ್ಡಿಯಾಗದು ಎಂದರು.
ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯೆ ಗೌಸಿಯಾಭಾನು ಮಾತನಾಡಿ ವಿದ್ಯಾರ್ಥಿನಿಯರು ವಿದ್ಯಾರ್ಥಿ ದೆಸೆಯಲ್ಲಿ ವೈಙ್ಞಾನಿಕವಾಗಿ ಸಮಾಜದ ವ್ಯವಸ್ಥೆಯ ಬಗ್ಗೆ ಅರಿಬೇಕಿದೆ ದಿನವು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರನ್ನು ಅಸಮಾನ್ಯ ಸಾಧನೆ ಮಾಡುತ್ತಿದ್ದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಲು ಶ್ರಮಿಸುತ್ತಿದ್ದಾಳೆ ಎಂದರು.ಮಹಿಳಾ ಸಾಧಕಿಯರ ಆದರ್ಶವನ್ನು ತಗೆದುಕೊಂಡು ವಿದ್ಯಾರ್ಥಿನಿಯರು ಸಮಾಜ ಹೆಮ್ಮೆ ಪಡುವಂತೆ ಸಾಧನೆ ಮಾಡುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಶಾಲ ಮುಖ್ಯಶಿಕ್ಷಕ ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು ಶಾಲ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆನಂದ್ ರೆಡ್ಡಿ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಮಂಜುಳಾ ಸಾಹಿತಿಗಳಾದ ಶಂಕರೇಗೌಡ ಪನಸಮಾಕಲಳ್ಳಿ ಚೌಡರೆಡ್ಡಿ .ಶಶಿಕಲಾ ವಿಜಯಮ್ಮ ಗೌರಮ್ಮ ಶ್ರೀದೇವಿ ಅಶ್ವಿನಿ ಗೀತಾಂಜಲಿ ರೆಡ್ಡಮ್ಮ ಮಹೇಶ್ ಪ್ರಸನ್ ನಾಗರಾಜ್ ನಾರಾಯಣಸ್ವಾಮಿ ರಾಮಚಂದ್ರಪ್ಪ ಚೇತನ್,ಸಿಆರ್ಪಿ ರಾಧಾಕೃಷ್ಣ ಮುಂತಾದವರು ಇದ್ದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೋಲಾರ ಜಿಲ್ಲಾ ಸಂಯೋಜಕರಾಗಿರುವ ಮಂಜುಳಾ ಭೀಮರಾವ್ ಪರಿಸರ ಸಂರಕ್ಷಣೆ ಸೇರಿದಂತೆ ವಿಜ್ಞಾನ ವಿಚಾರವಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುಳಾ ಭೀಮರಾವ್ ಮತ್ತು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗೌಸಿಯ ಬಾನು ರವರನ್ನು ಶಾಲೆಯ ವಿದ್ಯಾರ್ಥಿಗಳು ಸನ್ಮಾನಿಸಿದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27